ತಮ್ಮ ಹೊಸ ಪುಸ್ತಕ ‘ಆ್ಯಂಟಿ ಕ್ಲಾಕ್’ನಲ್ಲಿ ಅವರು ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಜೇಮ್ಸ್ ಅವರು ಕೇರಳ ರಾಜಧಾನಿ ತಿರುವನಂತಪುರದಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಎಂಜಿನಿಯರ್ ಆಗಿದ್ದಾರೆ. ಪಿಟಿಐ ಸುದ್ದಿಸಂಸ್ಥೆಗೆ ಇ–ಮೇಲ್ ಮೂಲಕ ಸಂದರ್ಶನ ನೀಡಿರುವ ಅವರು, ದೇಶದಲ್ಲಿನ ಅಸಮಾನತೆಗಳು ಹಾಗೂ ಏಕತೆ ಸಾಧಿಸುವ ಕುರಿತು ತಮ್ಮ ನಿಲುವುಗಳನ್ನು ಹಂಚಿಕೊಂಡಿದ್ದಾರೆ.