<p><strong>ಜೈಪುರ:</strong> ಆಗಸ್ಟ್ 14ರಿಂದ ರಾಜಸ್ಥಾನ ವಿಧಾನಸಭೆ ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮುನ್ನ ಬಿಜೆಪಿ ತನ್ನ ಆರು ಶಾಸಕರನ್ನು ಗುಜರಾತ್ನ ಪೋರಬಂದರ್ಗೆ ಸ್ಥಳಾಂತರಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.</p>.<p>ಶಾಸಕರು ಜೈಪುರ ವಿಮಾನ ನಿಲ್ದಾಣದಿಂದ ಬಿಜೆಪಿ ಆಡಳಿತದ ಗುಜರಾತ್ಗೆ ಚಾರ್ಟರ್ಡ್ವಿಮಾನದಲ್ಲಿ ತೆರಳಿದ್ದಾರೆ.ಶಾಸಕರು ಐಷಾರಾಮಿ ರೆಸಾರ್ಟ್ನಲ್ಲಿ ತಂಗಲಿದ್ದು, ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಈಗಾಗಲೇಶುಕ್ರವಾರ ಬಿಜೆಪಿಯ 12 ಶಾಸಕರು ರಾಜಸ್ಥಾನದಿಂದ ಗುಜರಾತ್ನ ಅಹಮದಾಬಾದ್ಗೆ ತೆರಳಿದ್ದು, ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದಾರೆ.</p>.<p>ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಹಾಗೂ18 ಶಾಸಕರ ಬಳಗ ಬಂಡಾಯ ಸಾರಿದ್ದರು. ಬಳಿಕ ರಾಜ್ಯದಲ್ಲಿ ಕುದುರೆ ವ್ಯಾಪಾರ ನಡೆಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.</p>.<p>ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಇದರಲ್ಲಿ ಎಲ್ಲ ಶಾಸಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸತೀಶ್ ಪೂನಿಯಾ ಹೇಳಿದ್ದಾರೆ.</p>.<p>‘ಕೆಲವು ಬಿಜೆಪಿ ಶಾಸಕರಿಗೆ ಪೊಲೀಸರು ಕಿರುಕುಳ ನೀಡುತ್ತಿದ್ದರು. ಕಿರುಕುಳಕ್ಕೊಳಗಾದ ಶಾಸಕರು ಸ್ವಯಂಪ್ರೇರಣೆಯಿಂದ ತೀರ್ಥಯಾತ್ರೆಗೆ ಹೋಗಿದ್ದಾರೆ’ ಎಂದು ವಿಮಾನ ನಿಲ್ದಾಣದಿಂದ ಹೊರಬಂದ ನಂತರ ಶಾಸಕ ಅಶೋಕ್ ಲಾಹೋತಿ ಪ್ರತಿಕ್ರಿಯಿಸಿದ್ದಾರೆ.</p>.<p>ಜೈಪುರ ವಿಮಾನ ನಿಲ್ದಾಣದಿಂದ ಶನಿವಾರ ಬಿಜೆಪಿ ಶಾಸಕರಾದ ನಿರ್ಮಲ್ ಕುಮಾವತ್, ಗೋಪಿಚಂದ್ ಮೀನಾ, ಜಬ್ಬರ್ ಸಿಂಗ್ ಸಂಖ್ಲಾ, ಧರ್ಮವೀರ್ ಮೋಚಿ, ಗೋಪಾಲ್ ಲಾಲ್ ಶರ್ಮಾ ಸೇರಿದಂತೆ ಗುರುದೀಪ್ ಸಿಂಗ್ ಶಾಹಪಿನಿ ಪೋರಬಂದರ್ಗೆ ತೆರಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ಆಗಸ್ಟ್ 14ರಿಂದ ರಾಜಸ್ಥಾನ ವಿಧಾನಸಭೆ ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮುನ್ನ ಬಿಜೆಪಿ ತನ್ನ ಆರು ಶಾಸಕರನ್ನು ಗುಜರಾತ್ನ ಪೋರಬಂದರ್ಗೆ ಸ್ಥಳಾಂತರಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.</p>.<p>ಶಾಸಕರು ಜೈಪುರ ವಿಮಾನ ನಿಲ್ದಾಣದಿಂದ ಬಿಜೆಪಿ ಆಡಳಿತದ ಗುಜರಾತ್ಗೆ ಚಾರ್ಟರ್ಡ್ವಿಮಾನದಲ್ಲಿ ತೆರಳಿದ್ದಾರೆ.ಶಾಸಕರು ಐಷಾರಾಮಿ ರೆಸಾರ್ಟ್ನಲ್ಲಿ ತಂಗಲಿದ್ದು, ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಈಗಾಗಲೇಶುಕ್ರವಾರ ಬಿಜೆಪಿಯ 12 ಶಾಸಕರು ರಾಜಸ್ಥಾನದಿಂದ ಗುಜರಾತ್ನ ಅಹಮದಾಬಾದ್ಗೆ ತೆರಳಿದ್ದು, ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದಾರೆ.</p>.<p>ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಹಾಗೂ18 ಶಾಸಕರ ಬಳಗ ಬಂಡಾಯ ಸಾರಿದ್ದರು. ಬಳಿಕ ರಾಜ್ಯದಲ್ಲಿ ಕುದುರೆ ವ್ಯಾಪಾರ ನಡೆಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.</p>.<p>ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಇದರಲ್ಲಿ ಎಲ್ಲ ಶಾಸಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸತೀಶ್ ಪೂನಿಯಾ ಹೇಳಿದ್ದಾರೆ.</p>.<p>‘ಕೆಲವು ಬಿಜೆಪಿ ಶಾಸಕರಿಗೆ ಪೊಲೀಸರು ಕಿರುಕುಳ ನೀಡುತ್ತಿದ್ದರು. ಕಿರುಕುಳಕ್ಕೊಳಗಾದ ಶಾಸಕರು ಸ್ವಯಂಪ್ರೇರಣೆಯಿಂದ ತೀರ್ಥಯಾತ್ರೆಗೆ ಹೋಗಿದ್ದಾರೆ’ ಎಂದು ವಿಮಾನ ನಿಲ್ದಾಣದಿಂದ ಹೊರಬಂದ ನಂತರ ಶಾಸಕ ಅಶೋಕ್ ಲಾಹೋತಿ ಪ್ರತಿಕ್ರಿಯಿಸಿದ್ದಾರೆ.</p>.<p>ಜೈಪುರ ವಿಮಾನ ನಿಲ್ದಾಣದಿಂದ ಶನಿವಾರ ಬಿಜೆಪಿ ಶಾಸಕರಾದ ನಿರ್ಮಲ್ ಕುಮಾವತ್, ಗೋಪಿಚಂದ್ ಮೀನಾ, ಜಬ್ಬರ್ ಸಿಂಗ್ ಸಂಖ್ಲಾ, ಧರ್ಮವೀರ್ ಮೋಚಿ, ಗೋಪಾಲ್ ಲಾಲ್ ಶರ್ಮಾ ಸೇರಿದಂತೆ ಗುರುದೀಪ್ ಸಿಂಗ್ ಶಾಹಪಿನಿ ಪೋರಬಂದರ್ಗೆ ತೆರಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>