ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೋಯಲ್ ನೇತೃತ್ವದ ಎನ್ಜಿಟಿಯ ಪ್ರಧಾನ ಪೀಠವು, ‘ಧಾರ್ಮಿಕ ನಂಬಿಕೆಯ ಪ್ರಕಾರ, ಬೆಂಕಿಯಿಂದ ಶವಸಂಸ್ಕಾರ ಮಾಡುವ ವಿಧಾನವನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ. ಆದರೆ, ಒಂದು ಶವಸಂಸ್ಕಾರ ಮಾಡಲು ತೆರೆದ ಸ್ಥಳದಲ್ಲಿ 350ರಿಂದ 450 ಕೆ.ಜಿ. ಕಟ್ಟಿಗೆಗಳನ್ನು ಸುಡುತ್ತಿದ್ದು, ಇದರಿಂದ ವಾಯುಮಾಲಿನ್ಯ ಉಂಟಾಗುತ್ತಿದೆ’ ಎಂದು ಹೇಳಿದೆ.