ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್–19 ಮೂರನೇ ಅಲೆಯ ತೀವ್ರತೆ ಹೆಚ್ಚಾಗಲು ಅನೇಕ ಅಂಶಗಳು ಕಾರಣವಾಗಿವೆ. ಅವುಗಳಲ್ಲಿ ಮಾಲಿನ್ಯ ಪ್ರಮುಖವಾದದ್ದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದ್ದಾರೆ. ಪ್ರಧಾನಿ ಜೊತೆಗಿನ ಸಭೆಯ ವೇಳೆ ಅವರು ಈ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.