‘ಪಕ್ಷದಲ್ಲಿ ನನ್ನನ್ನು ಕಡೆಗಣಿಸಲಾಗುತ್ತಿದೆ. ಇದರಿಂದ ತುಂಬಾ ನೋವಾಗಿದೆ. ನನ್ನ ತಾಳ್ಮೆಗೂ ಮಿತಿ ಇದೆ. ಇನ್ನು ಮುಂದೆ ಎಲ್ಲವನ್ನೂ ಸಹಿಸಿಕೊಂಡು ಇರಲು ಸಾಧ್ಯವಿಲ್ಲ. ಹೀಗಾಗಿ ಶಾಸಕ ಹಾಗೂ ಸಚಿವ ಸ್ಥಾನಗಳಿಗೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದೇನೆ’ ಎಂದು ನಮಶಿವಾಯಂ ಅವರು ಭಾನುವಾರ ರಾತ್ರಿ ತಮ್ಮ ಬೆಂಬಲಿಗರೊಂದಿಗೆ ನಡೆಸಿದ ಸಭೆಯಲ್ಲಿ ಹೇಳಿದ್ದರು.