ಉತ್ತರ ಪ್ರದೇಶದ ಪ್ರಯಾಗ್ರಾಜ್, ಗೌತಮ ಬುದ್ಧ ನಗರ ಜಿಲ್ಲೆಗಳಲ್ಲಿ ಲಸಿಕೆ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ‘ಲಸಿಕೆ ಕೊರತೆ ಇರುವ ಕಾರಣ ಪ್ರತಿದಿನ 10 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಹೀಗೇ ಆದರೆ, ಡಿಸೆಂಬರ್ ಅಂತ್ಯದ ವೇಳೆಗೆ 18 ವರ್ಷ ಮೇಲ್ಪಟ್ಟ ರಾಜ್ಯದ ಎಲ್ಲಾ ಜನರಿಗೆ ಲಸಿಕೆ ನೀಡುವುದು ಸಾಧ್ಯವಿಲ್ಲ’ ಎಂದು ಉತ್ತರ ಪ್ರದೇಶದ ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ಕಳವಳ ವ್ಯಕ್ತಪಡಿಸಿದ್ದಾರೆ.