ನವದೆಹಲಿ: ‘ಸಮಾಜದಲ್ಲಿ ಎಲ್ಲ ಸಂದರ್ಭಗಳಲ್ಲಿಯೂ ಕೆಲವೊಂದು ಸಮಸ್ಯೆಗಳು ಇರುತ್ತವೆ. ನೇರವಾಗಿ ಸುಪ್ರೀಂ ಕೋರ್ಟ್ ಕದ ತಟ್ಟುವುದರಿಂದ ಪ್ರತಿಯೊಂದು ಸಮಸ್ಯೆಯನ್ನು ಬಗೆಹರಿಸಿಕೊಳ್ಳಲಾಗದು’ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.
ಇದೇ ಸಂದರ್ಭದಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಂದುವರಿಸಲು ನಿರಾಸಕ್ತಿಯನ್ನು ವ್ಯಕ್ತಪಡಿಸಿತು ಹಾಗೂ ಈ ಸಂಬಂಧ ಎಲ್ಲ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿಗೊಳಿಸಲು ನಿರಾಕರಿಸಿತು.