ಕೋವಿಡ್ ಲಸಿಕೆ ಸಿದ್ಧವಾದ ಬಳಿಕ ಅದನ್ನು ಜನರಿಗೆ ಪೂರೈಸಲು ಬೇಕಾದ ಎಲ್ಲಾ ಸಂಪನ್ಮೂಲಗಳು ನಮ್ಮಲ್ಲಿವೆ. ಸೋಂಕು ಹಲವು ರಾಜ್ಯಗಳಲ್ಲಿ ಸ್ಥಿರವಾಗಿದ್ದು, ಕಳೆದ ಮೂರು ವಾರಗಳಲ್ಲಿ ಹೊಸ ಪ್ರಕರಣಗಳು ಮತ್ತು ಸಾವಿನ ಸಂಖ್ಯೆಯಲ್ಲಿ ಬಹುತೇಕ ಇಳಿಕೆಯಾಗಿದೆ. ಆದರೆ ಕೇರಳ, ಕರ್ನಾಟಕ, ರಾಜಸ್ಥಾನ, ಛತ್ತೀಸಗಢ, ಪಶ್ಚಿಮ ಬಂಗಾಳ ಮತ್ತು 3–4 ಕೇಂದ್ರಾಡಳಿತ ಪ್ರದೇಶದಲ್ಲಿ ಮಾತ್ರ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ ಎಂದು ಅವರು ಹೇಳಿದರು.