<p><strong>ಭುವನೇಶ್ವರ</strong>: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಲಿರುವ ಚಂಡಮಾರುತ ಅ. 25ರ ವೇಳೆಗೆ ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಹೇಳಿದೆ.</p>.<p>ಬಂಗಾಳ ಕೊಲ್ಲಿಯಲ್ಲಿ ಗುರುವಾರ ವಾಯುಭಾರ ಕುಸಿತ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಸೃಷ್ಟಿಯಾಗಲಿರುವ ಚಂಡಮಾರುತವು ಮುಂದಿನ ನಾಲ್ಕು ದಿನಗಳ ಅವಧಿಯಲ್ಲಿ ತೀವ್ರತೆ ಪಡೆಯಲಿದೆ. ಇದು ಒಡಿಶಾ ಕರಾವಳಿ ಮೂಲಕ ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾದೇಶದತ್ತ ಸಾಗಲಿದೆ ಎಂದು ಇಲಾಖೆ ತಿಳಿಸಿದೆ.</p>.<p>ಚಂಡಮಾರುತವು ಪಶ್ಚಿಮ ಹಾಗೂ ವಾಯವ್ಯ ಭಾಗದತ್ತ ಸಾಗಿ, ಆಗ್ನೇಯ ಭಾಗ ಹಾಗೂ ಪೂರ್ವ–ಮಧ್ಯ ಬಂಗಾಳ ಕೊಲ್ಲಿಯಲ್ಲಿ ಅ. 22ರ ವೇಳೆಗೆ ಕಡಿಮೆ ಒತ್ತಡದ ಪ್ರದೇಶ ಸೃಷ್ಟಿಯಾಗುವುದು. ನಂತರ, 23ರ ವೇಳೆಗೆ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದೂ ಇಲಾಖೆ ತಿಳಿಸಿದೆ.</p>.<p>ಅ. 23ರಂದು ಪುರಿ, ಕೇಂದ್ರಪಾಡ ಹಾಗೂ ಜಗತ್ಸಿಂಗ್ಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭುವನೇಶ್ವರದಲ್ಲಿರುವ ಪ್ರಾದೇಶಿಕ ಹವಾಮಾನ ಕೇಂದ್ರ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ</strong>: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಲಿರುವ ಚಂಡಮಾರುತ ಅ. 25ರ ವೇಳೆಗೆ ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಹೇಳಿದೆ.</p>.<p>ಬಂಗಾಳ ಕೊಲ್ಲಿಯಲ್ಲಿ ಗುರುವಾರ ವಾಯುಭಾರ ಕುಸಿತ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಸೃಷ್ಟಿಯಾಗಲಿರುವ ಚಂಡಮಾರುತವು ಮುಂದಿನ ನಾಲ್ಕು ದಿನಗಳ ಅವಧಿಯಲ್ಲಿ ತೀವ್ರತೆ ಪಡೆಯಲಿದೆ. ಇದು ಒಡಿಶಾ ಕರಾವಳಿ ಮೂಲಕ ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾದೇಶದತ್ತ ಸಾಗಲಿದೆ ಎಂದು ಇಲಾಖೆ ತಿಳಿಸಿದೆ.</p>.<p>ಚಂಡಮಾರುತವು ಪಶ್ಚಿಮ ಹಾಗೂ ವಾಯವ್ಯ ಭಾಗದತ್ತ ಸಾಗಿ, ಆಗ್ನೇಯ ಭಾಗ ಹಾಗೂ ಪೂರ್ವ–ಮಧ್ಯ ಬಂಗಾಳ ಕೊಲ್ಲಿಯಲ್ಲಿ ಅ. 22ರ ವೇಳೆಗೆ ಕಡಿಮೆ ಒತ್ತಡದ ಪ್ರದೇಶ ಸೃಷ್ಟಿಯಾಗುವುದು. ನಂತರ, 23ರ ವೇಳೆಗೆ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದೂ ಇಲಾಖೆ ತಿಳಿಸಿದೆ.</p>.<p>ಅ. 23ರಂದು ಪುರಿ, ಕೇಂದ್ರಪಾಡ ಹಾಗೂ ಜಗತ್ಸಿಂಗ್ಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭುವನೇಶ್ವರದಲ್ಲಿರುವ ಪ್ರಾದೇಶಿಕ ಹವಾಮಾನ ಕೇಂದ್ರ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>