ಈ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಉತ್ತರಪ್ರದೇಶದ ಅಲ್ಪಸಂಖ್ಯಾತರ ಕಲ್ಯಾಣ, ಮುಸ್ಲಿಂ ವಕ್ಫ್ ಮತ್ತು ಹಜ್ ಸಚಿವ ಮೊಹ್ಸಿನ್ ರಜಾ ಅವರು, ‘ಕುಲಪತಿ ಅವರು ನಮ್ಮ ಸಂಸ್ಕೃತಿಗೆ ತಕ್ಕಂತೆ ನಡೆದುಕೊಂಡಿದ್ದಾರೆ. ಅವರ ವಿರುದ್ಧ ಪೋಸ್ಟರ್ಗಳನ್ನು ಹಾಕುವುದು ವಾತಾವರಣವನ್ನು ಹಾಳುಮಾಡುವ ಪ್ರಯತ್ನ. ಈ ವಿಶ್ವವಿದ್ಯಾಲಯವು ಹಿಂದೂಸ್ತಾನದ್ದು. ಇಲ್ಲಿ ತಾಲಿಬಾನ್ ಇಲ್ಲ. ತಾಲಿಬಾನಿ ಮನಸ್ಥಿತಿಯ ವ್ಯಕ್ತಿಗಳಿದ್ದರೆ ಅವರಿಗೆ ನಾವು ಸೂಕ್ತ ಚಿಕಿತ್ಸೆ ನೀಡುತ್ತೇವೆ. ಘಟನೆಯ ಕುರಿತು ತನಿಖೆಗೆ ಅದೇಶಿಸಲಾಗಿದೆ’ ಎಂದು ಹೇಳಿದ್ದಾರೆ.