ಮುಂಬರುವ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗುವರು ಎಂಬ ಬಗ್ಗೆ ಕೆಲವು ಸಚಿವರು ನೀಡಿದ್ದ ಹೇಳಿಕೆಗಳೂ ಚರ್ಚೆಗೆ ಕಾರಣವಾಗಿದ್ದವು. ಕೆಲವರು ಮುಖ್ಯಮಂತ್ರಿ ಪಳನಿಸ್ವಾಮಿ ಪರ ಧ್ವನಿ ಎತ್ತಿದ್ದರೆ, ಮತ್ತೆ ಕೆಲವರು ಪಕ್ಷದ ವರಿಷ್ಠರು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡುವರು ಎಂದಿದ್ದರು. ಈಗ ಪನ್ನೀರ್ಸೆಲ್ವಂ ಪರ ಭಿತ್ತಿಪತ್ರಗಳು ಕಾಣಿಸಿಕೊಂಡಿರುವುದು, ಚರ್ಚೆ ಮತ್ತಷ್ಟು ಕಾವೇರುವಂತೆ ಮಾಡಿದೆ.