<p><strong>ನವದೆಹಲಿ: </strong>‘ಇಲ್ಲಿನ ಚೀನಾ ರಾಯಭಾರ ಕಚೇರಿಯ ಸಮೀಪ ತೈವಾನ್ ರಾಷ್ಟ್ರೀಯ ದಿನಕ್ಕೆ ಶುಭ ಕೋರುವ ಪೋಸ್ಟರ್ಗಳನ್ನು ಹಾಕಲಾಗಿತ್ತು. ನವದೆಹಲಿ ನಗರ ಪಾಲಿಕೆಯು (ಎನ್ಡಿಎಂಸಿ) ಕೆಲವೇ ಗಂಟೆಗಳಲ್ಲಿ ಅವುಗಳನ್ನು ತೆರವುಗೊಳಿಸಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ದೆಹಲಿಯ ಬಿಜೆಪಿ ನಾಯಕ ತೇಜಿಂದರ್ ಪಾಲ್ ಸಿಂಗ್ ಬಗ್ಗಾ ಅವರುಶಾಂತಿ ಪಥದಪಾದಚಾರಿ ಮಾರ್ಗದಲ್ಲಿ ಶುಕ್ರವಾರ ರಾತ್ರಿ ಹಾಕಿದ್ದ ಈ ಪೋಸ್ಟರ್ಗಳ ಮೇಲೆ ‘ತೈವಾನ್ ಹ್ಯಾಪಿ ನ್ಯಾಷನಲ್ ಡೇ– ಅಕ್ಟೋಬರ್ 10’ ಎಂದು ಬರೆಯಲಾಗಿತ್ತು. </p>.<p>ರಾಷ್ಟ್ರೀಯ ದಿನದ ಹಿನ್ನೆಲೆಯಲ್ಲಿ ತೈವಾನ್ ಸರ್ಕಾರವು ಭಾರತದ ಪ್ರಮುಖ ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಿತ್ತು. ಇದರಿಂದ ಎಚ್ಚೆತ್ತ ಚೀನಾ ಸರ್ಕಾರವು ಅಕ್ಟೋಬರ್ 7ರಂದು ಭಾರತ ಸರ್ಕಾರಕ್ಕೆ ಪತ್ರವೊಂದನ್ನು ಬರೆದಿತ್ತು.</p>.<p>‘ಚೀನಾದೊಂದಿಗೆ ರಾಜತಾಂತ್ರಿಕ ಸಂಬಂಧ ಹೊಂದಿರುವ ಎಲ್ಲಾ ರಾಷ್ಟ್ರಗಳು ಚೀನಾದ ‘ಏಕತಾ ಚೀನಾ’ ನೀತಿಯನ್ನು ಗೌರವಿಸಬೇಕು. ಭಾರತದ ಮಾಧ್ಯಮಗಳು ಕೂಡ ಅಲ್ಲಿನ ಸರ್ಕಾರದ ನಿರ್ಧಾರಕ್ಕೆ ಬದ್ಧವಾಗಿರಲಿವೆ ಎಂಬ ನಂಬಿಕೆ ನಮಗಿದೆ’ ಎಂದು ಪತ್ರದಲ್ಲಿ ತಿಳಿಸಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>‘ಇಲ್ಲಿನ ಚೀನಾ ರಾಯಭಾರ ಕಚೇರಿಯ ಸಮೀಪ ತೈವಾನ್ ರಾಷ್ಟ್ರೀಯ ದಿನಕ್ಕೆ ಶುಭ ಕೋರುವ ಪೋಸ್ಟರ್ಗಳನ್ನು ಹಾಕಲಾಗಿತ್ತು. ನವದೆಹಲಿ ನಗರ ಪಾಲಿಕೆಯು (ಎನ್ಡಿಎಂಸಿ) ಕೆಲವೇ ಗಂಟೆಗಳಲ್ಲಿ ಅವುಗಳನ್ನು ತೆರವುಗೊಳಿಸಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ದೆಹಲಿಯ ಬಿಜೆಪಿ ನಾಯಕ ತೇಜಿಂದರ್ ಪಾಲ್ ಸಿಂಗ್ ಬಗ್ಗಾ ಅವರುಶಾಂತಿ ಪಥದಪಾದಚಾರಿ ಮಾರ್ಗದಲ್ಲಿ ಶುಕ್ರವಾರ ರಾತ್ರಿ ಹಾಕಿದ್ದ ಈ ಪೋಸ್ಟರ್ಗಳ ಮೇಲೆ ‘ತೈವಾನ್ ಹ್ಯಾಪಿ ನ್ಯಾಷನಲ್ ಡೇ– ಅಕ್ಟೋಬರ್ 10’ ಎಂದು ಬರೆಯಲಾಗಿತ್ತು. </p>.<p>ರಾಷ್ಟ್ರೀಯ ದಿನದ ಹಿನ್ನೆಲೆಯಲ್ಲಿ ತೈವಾನ್ ಸರ್ಕಾರವು ಭಾರತದ ಪ್ರಮುಖ ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಿತ್ತು. ಇದರಿಂದ ಎಚ್ಚೆತ್ತ ಚೀನಾ ಸರ್ಕಾರವು ಅಕ್ಟೋಬರ್ 7ರಂದು ಭಾರತ ಸರ್ಕಾರಕ್ಕೆ ಪತ್ರವೊಂದನ್ನು ಬರೆದಿತ್ತು.</p>.<p>‘ಚೀನಾದೊಂದಿಗೆ ರಾಜತಾಂತ್ರಿಕ ಸಂಬಂಧ ಹೊಂದಿರುವ ಎಲ್ಲಾ ರಾಷ್ಟ್ರಗಳು ಚೀನಾದ ‘ಏಕತಾ ಚೀನಾ’ ನೀತಿಯನ್ನು ಗೌರವಿಸಬೇಕು. ಭಾರತದ ಮಾಧ್ಯಮಗಳು ಕೂಡ ಅಲ್ಲಿನ ಸರ್ಕಾರದ ನಿರ್ಧಾರಕ್ಕೆ ಬದ್ಧವಾಗಿರಲಿವೆ ಎಂಬ ನಂಬಿಕೆ ನಮಗಿದೆ’ ಎಂದು ಪತ್ರದಲ್ಲಿ ತಿಳಿಸಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>