<p><strong>ನವದೆಹಲಿ: </strong>‘ಕೇಂದ್ರೀಯ ಉತ್ಪಾದನಾ ಘಟಕ’ಗಳಿಂದ (ಸಿಜಿಎಸ್) ಹಂಚಿಕೆಯಾಗದ ವಿದ್ಯುತ್ ಅನ್ನು ಬಳಸಿಕೊಳ್ಳುವಂತೆ ರಾಜ್ಯಗಳಿಗೆ ಇಂಧನ ಸಚಿವಾಲಯ ಮಂಗಳವಾರ ತಿಳಿಸಿದೆ.</p>.<p>ದೇಶದಲ್ಲಿ ಕಲ್ಲಿದ್ದಲು ಕೊರತೆ ಹಾಗೂ ವಿದ್ಯುತ್ ಉತ್ಪಾದನೆಯಲ್ಲಿ ಕಂಡುಬಂದಿರುವ ತೊಂದರೆಯಿಂದಾಗಿ ಗ್ರಾಹಕರಿಗೆ ಸಮಸ್ಯೆ ಆಗಬಾರದು ಎಂಬ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.</p>.<p>‘ಕೆಲವು ರಾಜ್ಯಗಳು ಒಂದೆಡೆ ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಸರಬರಾಜು ಮಾಡುತ್ತಿಲ್ಲ ಹಾಗೂ ವಿದ್ಯುತ್ ನಿಲುಗಡೆಯನ್ನೂ ಆರಂಭಿಸಿವೆ. ಮತ್ತೊಂದೆಡೆ, ವಿನಿಮಯ ಕೇಂದ್ರಗಳ ಮೂಲಕ ಅಧಿಕ ದರಕ್ಕೆ ವಿದ್ಯುತ್ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ’ ಎಂದು ಸಚಿವಾಲಯ ತಿಳಿಸಿದೆ.</p>.<p>ವಿದ್ಯುತ್ ಹಂಚಿಕೆಗೆ ಸಂಬಂಧಿಸಿದ ಮಾರ್ಗಸೂಚಿಗಳ ಪ್ರಕಾರ ಸಿಜಿಎಸ್ಗಳಲ್ಲಿನ ಶೇ 15ರಷ್ಟು ವಿದ್ಯುತ್ಅನ್ನು ಹಂಚಿಕೆ ಮಾಡಿರುವುದಿಲ್ಲ. ಈ ರೀತಿ ಹಂಚಿಕೆ ಮಾಡದೇ ಇರುವ ವಿದ್ಯುತ್ಅನ್ನು ಪಡೆದು, ಗ್ರಾಹಕರಿಗೆ ಸರಬರಾಜು ಮಾಡುವಂತೆ ರಾಜ್ಯಗಳಿಗೆ ತಿಳಿಸಲಾಗಿದೆ. ಒಂದು ವೇಳೆ ಉತ್ಪಾದನೆ ಹೆಚ್ಚಿದರೆ, ಕೂಡಲೇ ಕೇಂದ್ರ ಸರ್ಕಾರಕ್ಕೆ ತಿಳಿಸಬೇಕು. ಇದರಿಂದ ಅಗತ್ಯವಿರುವ ರಾಜ್ಯಗಳಿಗೆ ವಿದ್ಯುತ್ ಮರುಹಂಚಿಕೆ ಮಾಡಲು ಅನುಕೂಲವಾಗುತ್ತದೆ ಎಂದು ಸೂಚಿಸಿದ್ದಾಗಿ ಸಚಿವಾಲಯ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>‘ಕೇಂದ್ರೀಯ ಉತ್ಪಾದನಾ ಘಟಕ’ಗಳಿಂದ (ಸಿಜಿಎಸ್) ಹಂಚಿಕೆಯಾಗದ ವಿದ್ಯುತ್ ಅನ್ನು ಬಳಸಿಕೊಳ್ಳುವಂತೆ ರಾಜ್ಯಗಳಿಗೆ ಇಂಧನ ಸಚಿವಾಲಯ ಮಂಗಳವಾರ ತಿಳಿಸಿದೆ.</p>.<p>ದೇಶದಲ್ಲಿ ಕಲ್ಲಿದ್ದಲು ಕೊರತೆ ಹಾಗೂ ವಿದ್ಯುತ್ ಉತ್ಪಾದನೆಯಲ್ಲಿ ಕಂಡುಬಂದಿರುವ ತೊಂದರೆಯಿಂದಾಗಿ ಗ್ರಾಹಕರಿಗೆ ಸಮಸ್ಯೆ ಆಗಬಾರದು ಎಂಬ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.</p>.<p>‘ಕೆಲವು ರಾಜ್ಯಗಳು ಒಂದೆಡೆ ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಸರಬರಾಜು ಮಾಡುತ್ತಿಲ್ಲ ಹಾಗೂ ವಿದ್ಯುತ್ ನಿಲುಗಡೆಯನ್ನೂ ಆರಂಭಿಸಿವೆ. ಮತ್ತೊಂದೆಡೆ, ವಿನಿಮಯ ಕೇಂದ್ರಗಳ ಮೂಲಕ ಅಧಿಕ ದರಕ್ಕೆ ವಿದ್ಯುತ್ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ’ ಎಂದು ಸಚಿವಾಲಯ ತಿಳಿಸಿದೆ.</p>.<p>ವಿದ್ಯುತ್ ಹಂಚಿಕೆಗೆ ಸಂಬಂಧಿಸಿದ ಮಾರ್ಗಸೂಚಿಗಳ ಪ್ರಕಾರ ಸಿಜಿಎಸ್ಗಳಲ್ಲಿನ ಶೇ 15ರಷ್ಟು ವಿದ್ಯುತ್ಅನ್ನು ಹಂಚಿಕೆ ಮಾಡಿರುವುದಿಲ್ಲ. ಈ ರೀತಿ ಹಂಚಿಕೆ ಮಾಡದೇ ಇರುವ ವಿದ್ಯುತ್ಅನ್ನು ಪಡೆದು, ಗ್ರಾಹಕರಿಗೆ ಸರಬರಾಜು ಮಾಡುವಂತೆ ರಾಜ್ಯಗಳಿಗೆ ತಿಳಿಸಲಾಗಿದೆ. ಒಂದು ವೇಳೆ ಉತ್ಪಾದನೆ ಹೆಚ್ಚಿದರೆ, ಕೂಡಲೇ ಕೇಂದ್ರ ಸರ್ಕಾರಕ್ಕೆ ತಿಳಿಸಬೇಕು. ಇದರಿಂದ ಅಗತ್ಯವಿರುವ ರಾಜ್ಯಗಳಿಗೆ ವಿದ್ಯುತ್ ಮರುಹಂಚಿಕೆ ಮಾಡಲು ಅನುಕೂಲವಾಗುತ್ತದೆ ಎಂದು ಸೂಚಿಸಿದ್ದಾಗಿ ಸಚಿವಾಲಯ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>