ಉತ್ತರಾಖಂಡ ಬ್ರಾಹ್ಮಣ ಮತದಾರರು ನಿರ್ಣಾಯಕವಾಗಿರುವ ರಾಜ್ಯವಾಗಿದ್ದು, ಅಲ್ಲಿಗೆ ಪ್ರಲ್ಹಾದ ಜೋಷಿ ಅವರನ್ನು ನಿಯೋಜಿಸಲಾಗಿದೆ. ಬ್ರಾಹ್ಮಣ ಮತಗಳು ಚದುರಿ ಹೋಗದಂತೆ ಕಾಯ್ದುಕೊಳ್ಳುವುದರ ಜತೆಗೆ ಗೆಲುವು ಸಾಧಿಸಲು ಅಗತ್ಯ ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಜೋಷಿಯವರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ಬಿಜೆಪಿ ಮೂಲಗಳು ಹೇಳಿವೆ.