ಮಾಧ್ಯಮದವರೊಂದಿಗೆ ಮಾತನಾಡಿರುವ ಜೋಶಿ, 'ಸೋನಿಯಾ ಹಾಗೂ ರಾಹುಲ್ ಗಾಂಧಿ ಇಬ್ಬರೂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಆದರೆ, ನ್ಯಾಷನಲ್ ಹೆರಾಲ್ಡ್ ಪ್ರಕರಣ ವಜಾ ಆಗಿಲ್ಲ. ಅವರು ಜಾಮೀನಿನ ಮೇಲೆ ಹೊರಗಿದ್ದಾರೆ. ಪ್ರಧಾನಿ ಮೋದಿ ಮುಖ್ಯಮಂತ್ರಿಯಾಗಿದ್ದಾಗ ಅವರಿಗೂ ಕಾಂಗ್ರೆಸ್ನವರು ಕಿರುಕುಳ ನೀಡಿದ್ದಾರೆ. ನಿನ್ನೆ, ನಾವು ಬೆಲೆ ಏರಿಕೆ ಕುರಿತ ಚರ್ಚೆಗೆ ಒಪ್ಪಿಕೊಂಡ ನಂತರವೂ ಸಂಸತ್ ಕಲಾಪಕ್ಕೆ ಅವಕಾಶ ನೀಡಿಲ್ಲ. ಅವರು ಕಾನೂನಿಗಿಂತ ದೊಡ್ಡವರು ಎಂದು ಭಾವಿಸಿದ್ದಾರೆ' ಎಂದು ಹೇಳಿದ್ದಾರೆ.