ಪ್ರಧಾನಿ ನರೇಂದ್ರ ಮೋದಿ ಅವರು ‘ನಿರಂಕುಶ ಶೈಲಿಯ ಕಾರ್ಯವೈಖರಿ’ಯನ್ನು ಪ್ರಯೋಗಿಸಿದರೆ, ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಯುಪಿಎಯನ್ನು ಉಳಿಸುವುದರಲ್ಲೇ ‘ತಲ್ಲೀನ’ರಾಗಿದ್ದುದು ಆಡಳಿತದ ಮೇಲೆ ಪ್ರತಿಕೂಲ ಪರಿಣಾಮ ಬೀರಿತು. ಲೋಕಸಭೆ ಚುನಾವಣೆಗೂ ಮುನ್ನ (2014) ರಾಜಕೀಯ ಗುರಿ ಕಳೆದುಕೊಂಡಿದ್ದ ಕಾಂಗ್ರೆಸ್ನ ವ್ಯವಹಾರಗಳನ್ನು ನಿಭಾಯಿಸಲು ಸೋನಿಯಾ ಗಾಂಧಿ ‘ಅಸಮರ್ಥ’ರಾಗಿದ್ದರು ಎಂದು ಪ್ರಣವ್ ಈ ಕೃತಿಯಲ್ಲಿ ಬರೆದಿದ್ದಾರೆ. ಇದು ಸಾಕಷ್ಟು ವಿವಾದಕ್ಕೂ ಎಡೆಮಾಡಿಕೊಟ್ಟಿದೆ.