<p><strong>ನವದೆಹಲಿ:</strong> ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತನ್ನ ವಿರುದ್ಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಪುನರ್ಪರಿಶೀಲಿಸಲು ಅರ್ಜಿ ಸಲ್ಲಿಸುವವರೆಗೂ ಹಾಗೂ ಅದನ್ನು ಪರಿಗಣಿಸುವವರೆಗೂ, ಪ್ರಕರಣದ ವಿಚಾರಣೆಯನ್ನು ಮುಂದೂಡಬೇಕು ಎಂದುವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಸುಪ್ರೀಂ ಕೋರ್ಟ್ಗೆ ಬುಧವಾರ ಅರ್ಜಿ ಸಲ್ಲಿಸಿದ್ದಾರೆ.</p>.<p>ಸುಪ್ರೀಂ ಕೋರ್ಟ್ ಹಾಗೂ ಮುಖ್ಯನ್ಯಾಯಮೂರ್ತಿ(ಸಿಜೆಐ)ಕಚೇರಿಯ ಘನತೆಗೆ ಚ್ಯುತಿ ತರುವಂತಹ ಟ್ವೀಟ್ ಮಾಡಿದ್ದ ಪ್ರಕರಣದಲ್ಲಿ ಭೂಷಣ್ ತಪ್ಪಿತಸ್ಥರು ಎಂದು ಆ.14ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಗುರುವಾರ(ಆ.20) ಶಿಕ್ಷೆಯ ಪರಿಮಾಣದ ವಿಚಾರಣೆ ನಿಗದಿಯಾಗಿತ್ತು. ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಆರು ತಿಂಗಳ ಜೈಲು ಶಿಕ್ಷೆ ಅಥವಾ ₹2 ಸಾವಿರ ದಂಡ ಅಥವಾ ಜೈಲು ಶಿಕ್ಷೆ, ದಂಡ ಎರಡನ್ನೂ ವಿಧಿಸುವ ಸಾಧ್ಯತೆ ಇದೆ. ಆದರೆ ಇದಕ್ಕೂ ಮುನ್ನವೇ ಈ ವಿಚಾರಣೆ ಮುಂದೂಡುವಂತೆ ಭೂಷಣ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.</p>.<p>‘ಆಗಸ್ಟ್ 14ರಂದು ನೀಡಿದ್ದ ತೀರ್ಪನ್ನು ವಿಸ್ತೃತವಾಗಿ ಅಧ್ಯಯನ ಮಾಡಿದ ಬಳಿಕ ಪುನರ್ಪರಿಶೀಲನಾ ಅರ್ಜಿ ಸಲ್ಲಿಸಲು ನಾನು ನಿರ್ಧರಿಸಿದ್ದೇನೆ. ಕಾನೂನು ತಜ್ಞರ ಅಭಿಪ್ರಾಯವನ್ನೂ ಪಡೆದಿದ್ದೇನೆ. ವಾಕ್ ಸ್ವಾತಂತ್ರ್ಯದ ವಿಚಾರದಲ್ಲಿ ಈ ತೀರ್ಪುನ ವಿವಿಧ ಆಯಾಮಗಳು ಮಹತ್ವದ್ದಾಗಿದೆ. ತೀರ್ಪು ನೀಡಿದ 30 ದಿನದೊಳಗಾಗಿ ಪುನರ್ಪರಿಶೀಲನಾ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಕಾರಣದಿಂದ ಆ.20ರಂದು ನಿಗದಿಪಡಿಸಿರುವ ವಿಚಾರಣೆಯನ್ನು ಮುಂದೂಡಬೇಕು’ ಎಂದು ಅರ್ಜಿಯಲ್ಲಿ ಭೂಷಣ್ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತನ್ನ ವಿರುದ್ಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಪುನರ್ಪರಿಶೀಲಿಸಲು ಅರ್ಜಿ ಸಲ್ಲಿಸುವವರೆಗೂ ಹಾಗೂ ಅದನ್ನು ಪರಿಗಣಿಸುವವರೆಗೂ, ಪ್ರಕರಣದ ವಿಚಾರಣೆಯನ್ನು ಮುಂದೂಡಬೇಕು ಎಂದುವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಸುಪ್ರೀಂ ಕೋರ್ಟ್ಗೆ ಬುಧವಾರ ಅರ್ಜಿ ಸಲ್ಲಿಸಿದ್ದಾರೆ.</p>.<p>ಸುಪ್ರೀಂ ಕೋರ್ಟ್ ಹಾಗೂ ಮುಖ್ಯನ್ಯಾಯಮೂರ್ತಿ(ಸಿಜೆಐ)ಕಚೇರಿಯ ಘನತೆಗೆ ಚ್ಯುತಿ ತರುವಂತಹ ಟ್ವೀಟ್ ಮಾಡಿದ್ದ ಪ್ರಕರಣದಲ್ಲಿ ಭೂಷಣ್ ತಪ್ಪಿತಸ್ಥರು ಎಂದು ಆ.14ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಗುರುವಾರ(ಆ.20) ಶಿಕ್ಷೆಯ ಪರಿಮಾಣದ ವಿಚಾರಣೆ ನಿಗದಿಯಾಗಿತ್ತು. ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಆರು ತಿಂಗಳ ಜೈಲು ಶಿಕ್ಷೆ ಅಥವಾ ₹2 ಸಾವಿರ ದಂಡ ಅಥವಾ ಜೈಲು ಶಿಕ್ಷೆ, ದಂಡ ಎರಡನ್ನೂ ವಿಧಿಸುವ ಸಾಧ್ಯತೆ ಇದೆ. ಆದರೆ ಇದಕ್ಕೂ ಮುನ್ನವೇ ಈ ವಿಚಾರಣೆ ಮುಂದೂಡುವಂತೆ ಭೂಷಣ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.</p>.<p>‘ಆಗಸ್ಟ್ 14ರಂದು ನೀಡಿದ್ದ ತೀರ್ಪನ್ನು ವಿಸ್ತೃತವಾಗಿ ಅಧ್ಯಯನ ಮಾಡಿದ ಬಳಿಕ ಪುನರ್ಪರಿಶೀಲನಾ ಅರ್ಜಿ ಸಲ್ಲಿಸಲು ನಾನು ನಿರ್ಧರಿಸಿದ್ದೇನೆ. ಕಾನೂನು ತಜ್ಞರ ಅಭಿಪ್ರಾಯವನ್ನೂ ಪಡೆದಿದ್ದೇನೆ. ವಾಕ್ ಸ್ವಾತಂತ್ರ್ಯದ ವಿಚಾರದಲ್ಲಿ ಈ ತೀರ್ಪುನ ವಿವಿಧ ಆಯಾಮಗಳು ಮಹತ್ವದ್ದಾಗಿದೆ. ತೀರ್ಪು ನೀಡಿದ 30 ದಿನದೊಳಗಾಗಿ ಪುನರ್ಪರಿಶೀಲನಾ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಕಾರಣದಿಂದ ಆ.20ರಂದು ನಿಗದಿಪಡಿಸಿರುವ ವಿಚಾರಣೆಯನ್ನು ಮುಂದೂಡಬೇಕು’ ಎಂದು ಅರ್ಜಿಯಲ್ಲಿ ಭೂಷಣ್ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>