ನವದೆಹಲಿ: ‘ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶ ಪ್ರಕಟವಾಗುವ ಮೊದಲೇ ದೀದಿ (ಮಮತಾ ಬ್ಯಾನರ್ಜಿ) ಅವರ ರಾಜಕೀಯ ಸಲಹೆಗಾರ, ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರು ದೀದಿಯನ್ನು ತೊರೆದು, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಪ್ರಧಾನ ಸಲಹೆಗಾರರಾಗಿ ಸೇರಿಕೊಂಡಿದ್ದಾರೆ. ಇದು ಸಾಕಷ್ಟು ಸಂಗತಿಗಳನ್ನು ಧ್ವನಿಸುತ್ತದೆ’ ಎಂದು ಬಿಜೆಪಿ ಮಂಗಳವಾರ ಲೇವಡಿ ಮಾಡಿದೆ.