<p><strong>ನವದೆಹಲಿ:</strong> ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಅವರೊಬ್ಬ ರಾಜಕೀಯವಾಗಿ ತಿರಸ್ಕೃತ, ಬಳಲಿದ ನಾಯಕನಾಗಿದ್ದು, ಬಿಹಾರವು ಇನ್ನಷ್ಟು ವರ್ಷಗಳವರೆಗೆ ನೀರಸ ಆಡಳಿತ ಅನುಭವಿಸಬೇಕಾಗಿದೆ ಎಂದು ಚುನಾವಣಾ ಕಾರ್ಯತಂತ್ರಜ್ಞ ಪ್ರಶಾಂತ್ ಕಿಶೋರ್ ವ್ಯಂಗ್ಯವಾಡಿದ್ದಾರೆ.</p>.<p>‘ಬಿಜೆಪಿ ನಾಮನಿರ್ದೇಶಿತ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಿತೀಶ್ ಕುಮಾರ್ ಅವರಿಗೆ ಅಭಿನಂದನೆಗಳು. ರಾಜಕೀಯವಾಗಿ ತಿರಸ್ಕೃತ, ಬಳಲಿದ ನಾಯಕ ಮುಖ್ಯಮಂತ್ರಿಯಾಗಿರುವುದರಿಂದ ಬಿಹಾರವು ಇನ್ನಷ್ಟು ವರ್ಷಗಳ ಕಾಲ ನೀರಸ ಆಡಳಿತ ಅನುಭವಿಸಬೇಕಾಗಿದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/nitish-kumar-takes-oath-as-chief-minister-for-4th-term-bihar-government-formation-779560.html" itemprop="url">ಬಿಹಾರ: ಏಳನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್</a></p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/prashant-kishor-and-pavan-varma-expelled-by-jdu-for-indiscipline-701568.html" target="_blank">ಜೆಡಿಯು ನಿಲುವನ್ನು ವಿರೋಧಿಸಿದ್ದ ಪ್ರಶಾಂತ್ ಕಿಶೋರ್, ಪವನ್ ವರ್ಮಾರ ಉಚ್ಛಾಟನೆ</a></p>.<p>ಬಿಹಾರ ಮುಖ್ಯಮಂತ್ರಿಯಾಗಿ ಏಳನೇ ಬಾರಿಗೆ ನಿತೀಶ್ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಕಿಶೋರ್ ಈ ಟ್ವೀಟ್ ಮಾಡಿದ್ದಾರೆ.</p>.<p>ಅತ್ಯಂತ ಆಪ್ತರಾಗಿದ್ದ ನಿತೀಶ್ ಮತ್ತು ಕಿಶೋರ್ ಬಾಂಧವ್ಯ ಹಳಸಿತ್ತು. ಜೆಡಿಯು ಉಪಾಧ್ಯಕ್ಷರಾಗಿದ್ದ ಕಿಶೋರ್ ಅವರನ್ನು ಜನವರಿಯಲ್ಲಿ ಪಕ್ಷದಿಂದಲೇ ಉಚ್ಚಾಟನೆ ಮಾಡಲಾಗಿತ್ತು.</p>.<p>ಕಿಶೋರ್ ಅವರು ಕೆಲವು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಅವರೊಬ್ಬ ರಾಜಕೀಯವಾಗಿ ತಿರಸ್ಕೃತ, ಬಳಲಿದ ನಾಯಕನಾಗಿದ್ದು, ಬಿಹಾರವು ಇನ್ನಷ್ಟು ವರ್ಷಗಳವರೆಗೆ ನೀರಸ ಆಡಳಿತ ಅನುಭವಿಸಬೇಕಾಗಿದೆ ಎಂದು ಚುನಾವಣಾ ಕಾರ್ಯತಂತ್ರಜ್ಞ ಪ್ರಶಾಂತ್ ಕಿಶೋರ್ ವ್ಯಂಗ್ಯವಾಡಿದ್ದಾರೆ.</p>.<p>‘ಬಿಜೆಪಿ ನಾಮನಿರ್ದೇಶಿತ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಿತೀಶ್ ಕುಮಾರ್ ಅವರಿಗೆ ಅಭಿನಂದನೆಗಳು. ರಾಜಕೀಯವಾಗಿ ತಿರಸ್ಕೃತ, ಬಳಲಿದ ನಾಯಕ ಮುಖ್ಯಮಂತ್ರಿಯಾಗಿರುವುದರಿಂದ ಬಿಹಾರವು ಇನ್ನಷ್ಟು ವರ್ಷಗಳ ಕಾಲ ನೀರಸ ಆಡಳಿತ ಅನುಭವಿಸಬೇಕಾಗಿದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/nitish-kumar-takes-oath-as-chief-minister-for-4th-term-bihar-government-formation-779560.html" itemprop="url">ಬಿಹಾರ: ಏಳನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್</a></p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/prashant-kishor-and-pavan-varma-expelled-by-jdu-for-indiscipline-701568.html" target="_blank">ಜೆಡಿಯು ನಿಲುವನ್ನು ವಿರೋಧಿಸಿದ್ದ ಪ್ರಶಾಂತ್ ಕಿಶೋರ್, ಪವನ್ ವರ್ಮಾರ ಉಚ್ಛಾಟನೆ</a></p>.<p>ಬಿಹಾರ ಮುಖ್ಯಮಂತ್ರಿಯಾಗಿ ಏಳನೇ ಬಾರಿಗೆ ನಿತೀಶ್ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಕಿಶೋರ್ ಈ ಟ್ವೀಟ್ ಮಾಡಿದ್ದಾರೆ.</p>.<p>ಅತ್ಯಂತ ಆಪ್ತರಾಗಿದ್ದ ನಿತೀಶ್ ಮತ್ತು ಕಿಶೋರ್ ಬಾಂಧವ್ಯ ಹಳಸಿತ್ತು. ಜೆಡಿಯು ಉಪಾಧ್ಯಕ್ಷರಾಗಿದ್ದ ಕಿಶೋರ್ ಅವರನ್ನು ಜನವರಿಯಲ್ಲಿ ಪಕ್ಷದಿಂದಲೇ ಉಚ್ಚಾಟನೆ ಮಾಡಲಾಗಿತ್ತು.</p>.<p>ಕಿಶೋರ್ ಅವರು ಕೆಲವು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>