ಪಟ್ನಾ: ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರು, ಅಲ್ಲಿನ ರಾಷ್ಟ್ರೀಯ ಹೆದ್ದಾರಿಯೊಂದರ ಭೀಕರ ಹೊಂಡಗುಂಡಿಗಳಿರುವ ಫೋಟೊ, ವಿಡಿಯೊಗಳನ್ನು ಹಂಚಿಕೊಂಡಿದ್ದಾರೆ. '1990ರ ಜಂಗಲ್ ರಾಜ್ ನೆನಪಾಗುತ್ತಿದೆ' ಎಂದು ವ್ಯಂಗ್ಯವಾಡಿದ್ದಾರೆ.
ಇದು ಬಿಹಾರದ ಮಧುಬನಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ದೃಶ್ಯಗಳು ಎಂದು ಪ್ರಶಾಂತ್ ಕಿಶೋರ್ ವಿವರಿಸಿದ್ದಾರೆ.
ಟ್ವೀಟ್ನಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಉಲ್ಲೇಖಿಸಿರುವ ಪ್ರಶಾಂತ್, ಇತ್ತೀಚೆಗೆ ನಿತೀಶ್ ಜೀ ಅವರು ಕಾರ್ಯಕ್ರಮವೊಂದರಲ್ಲಿ ರಸ್ತೆ ನಿರ್ಮಾಣ ಇಲಾಖೆಯ ಅಧಿಕಾರಿಗಳಿಗೆ ರಾಜ್ಯದ ರಸ್ತೆಗಳ ಉತ್ತಮ ಪರಿಸ್ಥಿತಿ ಬಗ್ಗೆ ಜನರಿಗೆ ತಿಳಿಸುವಂತೆ ಹೇಳಿದ್ದರು' ಎಂದಿದ್ದಾರೆ.
ಬಿಹಾರದಲ್ಲಿ ಪರಿವರ್ತನೆ ತರಲು ಹಾಗೂ ರಾಜ್ಯದಲ್ಲಿ ರಾಜಕೀಯವಾಗಿ ಪರ್ಯಾಯವನ್ನು ನೀಡುವ ಉದ್ದೇಶದಿಂದ ಪ್ರಶಾಂತ್ ಕಿಶೋರ್ ಅವರು 'ಜನ್ ಸುರಾಜ್' ವೇದಿಕೆ ಮೂಲಕ ಸಕ್ರಿಯ ರಾಜಕಾರಣಕ್ಕೆ ದುಮುಕಿದ್ದಾರೆ.
'1990ರ ಜಂಗಲ್ ರಾಜ್' ಎಂಬುದು ಬಿಹಾರವನ್ನು 15 ವರ್ಷಗಳ ಕಾಲ ಆಳಿದ ಲಾಲು ಪ್ರಸಾದ್ ಮತ್ತು ಅವರ ಪತ್ನಿ ರಾಬ್ರಿ ದೇವಿ ಅವರ ಕುರಿತಾಗಿದೆ. ಅರಾಜಕತೆ ಮತ್ತು ಕೆಟ್ಟ ರಸ್ತೆಗಳ ಬಗ್ಗೆ ಆರ್ಜೆಡಿ ತೀವ್ರ ಟೀಕೆಗೆ ಒಳಗಾಗಿತ್ತು. 2005ರಲ್ಲಿ ಆರ್ಜೆಡಿಯನ್ನು ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಸೋಲಿಸಿ ಅಧಿಕಾರಕ್ಕೆ ಬಂತು.
2015ರ ವಿಧಾನಸಭೆ ಚುನಾವಣೆಯಲ್ಲಿ ಲಾಲು ಪ್ರಸಾದ್ ಮತ್ತು ನಿತೀಶ್ ಕುಮಾರ್ ಮೈತ್ರಿಕೂಟವು ಜಯ ಗಳಿಸಲು ಕಿಶೋರ್ ಪ್ರಮುಖ ಪಾತ್ರವಹಿಸಿದ್ದರು.
90 के दशक के जंगलराज में बिहार में सड़कों की स्थिति की याद दिलाता यह बिहार के मधुबनी जिले का नेशनल हाईवे 227 (L) है।
अभी हाल में ही #Nitishkumar जी एक कार्यक्रम में पथ निर्माण विभाग के लोगों को बोल रहे थे कि बिहार में सड़कों की अच्छी स्थिति के बारे में उन्हें सबको बताना चाहिए। pic.twitter.com/Qp0ehEluty