ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಸ್ಥಾನಕ್ಕೆ ಸುಖು ಹೆಸರು ಕೇಳಿ ಬರುತ್ತಲೇ ಸಿಡಿದ ಪ್ರತಿಭಾ ಸಿಂಗ್‌ ಬೆಂಬಲಿಗರು

Last Updated 10 ಡಿಸೆಂಬರ್ 2022, 13:35 IST
ಅಕ್ಷರ ಗಾತ್ರ

ಶಿಮ್ಲಾ: ಹಿಮಾಚಲ ಪ್ರದೇಶ ಚುನಾವಣೆಯ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಸುಖ್ವಿಂದರ್ ಸಿಂಗ್ ಸುಖು ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದು ವರದಿಗಳು ಪ್ರಕಟವಾಗುತ್ತಲೇ, ಸಿಎಂ ಸ್ಥಾನದ ಆಕಾಂಕ್ಷಿ ಪ್ರತಿಭಾ ಸಿಂಗ್‌ ಅವರ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ.

ಹಿಮಾಚಲ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷೆಯೂ ಆಗಿರುವ ಪ್ರತಿಭಾ ಸಿಂಗ್‌ ಅವರಿಗೇ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಶುಕ್ರವಾರ ಬೆಳಗ್ಗೆ ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್ ಅವರ ಬೆಂಗಾವಲು ವಾಹನವನ್ನು ಒಬೆರಾಯ್ ಸೆಸಿಲ್ ಬಳಿ ತಡೆದಿದ್ದ ಪ್ರತಿಭಾ ಸಿಂಗ್‌ ಬೆಂಬಲಿಗರು ಅವರ ಪರ ಘೋಷಣೆಗಳನ್ನು ಕೂಗಿದ್ದರು. ಭೂಪೇಶ್‌ ಬಘೇಲ್‌ ಅವರು ರಾಜ್ಯಕ್ಕೆ ವೀಕ್ಷಕರಾಗಿ ಆಗಮಿಸಿದ್ದಾರೆ.

ಪ್ರತಿಭಾ ಸಿಂಗ್‌ ಅವರು ಹಿಮಾಚಲ ಪ್ರದೇಶದ ಮಾಜಿ ಸಿಎಂ, ದಿವಂಗತ ವೀರಭದ್ರ ಸಿಂಗ್‌ ಅವರ ಪತ್ನಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT