ನವದೆಹಲಿ:ತೀವ್ರ ಕುತೂಹಲ ಕೆರಳಿಸಿರುವ ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ವಿಧಾನಸಭೆ ಚುನಾವಣೆ ಘೋಷಣೆಯಾದ ಬೆನ್ನಲೇ ಚುನಾವಣ ಪೂರ್ವ ಸಮೀಕ್ಷೆಗಳು ಹೊರ ಬಿದ್ದಿವೆ.
ಎಬಿಪಿ ಸಿ–ವೋಟರ್ ಸಮೀಕ್ಷೆಯಲ್ಲಿ ಮೊದಲ ಬಾರಿಗೆ ಪುದುಚೇರಿಯಲ್ಲಿ ಕಮಲ ಅರಳಲಿದ್ದು, ಅಸ್ಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಸಮೀಕ್ಷೆ ಹೇಳಿದೆ.
ತೀವ್ರ ಕುತೂಹಲ ಕೆರಳಿಸಿರುವ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹಾಗೂ ಬಿಜೆಪಿ ನಡುವೆ ತೀವ್ರ ಹಣಾಹಣಿ ನಡೆಯಲಿದೆ. ಕೇರಳದಲ್ಲಿ ಮತ್ತೆ ಎಡರಂಗ ಅಧಿಕಾರ ಹಿಡಿದರೆ, ತಮಿಳುನಾಡು ಡಿಎಂಕೆ ಪಾಲಾಗಲಿದೆ ಎಂದು ಎಬಿಪಿ ಸಿ–ವೋಟರ್ ಸಮೀಕ್ಷೆ
ದಕ್ಷಿಣ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯುವ ಆಸೆಗೆ ಮತ್ತೆ ಹಿನ್ನಡೆ ಉಂಟಾಗಿದೆ. ತಮಿಳುನಾಡಿನಲ್ಲಿ ಎಐಎಡಿಎಂಕೆ ಮೈತ್ರಿಯೊಂದಿಗೆ ಪಕ್ಷದ ವರ್ಚಸ್ಸು ವೃದ್ಧಿಯಾಗಲಿದೆ. ಕೇರಳದಲ್ಲಿ ಬಿಜೆಪಿ ಎರಡಂಕಿ ಸ್ಥಾನಗಳನ್ನು ಪಡೆಯದೇ ಹೋದರು ಮತಗಳಿಕೆ ಪ್ರಮಾಣ ಹೆಚ್ಚಲಿದೆ ಎಂದು ಸಮೀಕ್ಷೆ ಹೇಳಿದೆ.
ತಮಿಳುನಾಡು –234(ಒಟ್ಟು ಸ್ಥಾನಗಳು) ಡಿಎಂಕೆ– ಕಾಂಗ್ರೆಸ್ –154–162 ಎಐಎಡಿಎಂಕೆ– ಬಿಜೆಪಿ –56–66 ಇತರರು – 8–20