ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ನೀತಿ ಪ್ರಕಾರ ಅಪರಾಧಿಯ ಬಿಡುಗಡೆ ಪರಿಗಣಿಸಿ: ಸುಪ್ರೀಂ

Last Updated 15 ಮೇ 2022, 11:33 IST
ಅಕ್ಷರ ಗಾತ್ರ

ನವದೆಹಲಿ: ‘ಅಪರಾಧ ಎಸಗಿದ ರಾಜ್ಯದಲ್ಲಿ ಅನ್ವಯವಾಗುವ ನೀತಿಯ ಪ್ರಕಾರ ಅಪರಾಧಿಯ ಅವಧಿಪೂರ್ವ ಬಿಡುಗಡೆಯನ್ನು ಪರಿಗಣಿಸಬೇಕೇ ಹೊರತು ವಿಚಾರಣೆಯನ್ನು ವರ್ಗಾಯಿಸಿ ಮುಕ್ತಾಯಗೊಳಿಸಿದ ಸ್ಥಳವನ್ನು ಆಧರಿಸಿ ಅಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ವಿಕ್ರಮ್ ನಾಥ್ ಅವರನ್ನೊಳಗೊಂಡ ನ್ಯಾಯಪೀಠವು, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) 1973, ಸೆಕ್ಷನ್ 432 (7) ಅನ್ನು ಉಲ್ಲೇಖಿಸಿ ಪ್ರಕರಣವೊಂದರ ವಿಚಾರಣೆ ವೇಳೆ ಈ ರೀತಿಯಾಗಿ ಅಭಿಪ್ರಾಯಪಟ್ಟಿದೆ.

ಶಿಕ್ಷೆಯ ಸಮಯದಲ್ಲಿ ಅಸ್ತಿತ್ವದಲ್ಲಿದ್ದ ಕಾಯ್ದೆಯ ಅಡಿಯಲ್ಲಿ ಅವಧಿಪೂರ್ವ ಬಿಡುಗಡೆಗಾಗಿ ತನ್ನ ಅರ್ಜಿಯನ್ನು ಪರಿಗಣಿಸಲು ಗುಜರಾತ್ ರಾಜ್ಯಕ್ಕೆ ನಿರ್ದೇಶನವನ್ನು ಕೋರಿ ಅಪರಾಧಿಯೊಬ್ಬರು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT