ರಾಜ್ಯಗಳ ಅಗತ್ಯಗಳಿಗೆ ಅನುಗುಣವಾಗಿ ಹೆಚ್ಚು ರೈಲುಗಳನ್ನು ಆರಂಭಿಸಬಹುದು. ಆದ್ದರಿಂದ, ರಾಜ್ಯ ಸರ್ಕಾರಗಳ ಜೊತೆ ಸಂಪರ್ಕದಲ್ಲಿ ಇರಲು ರೈಲ್ವೆ ವಿಭಾಗೀಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಿಶೇಷ ರೈಲುಗಳನ್ನು ಹೆಚ್ಚಾಗಿ ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ, ಜಾರ್ಖಂಡ್ ರಾಜ್ಯಗಳಿಂದ ಮಹಾನಗರಗಳಾದ ದೆಹಲಿ, ಮುಂಬೈ, ಬೆಂಗಳೂರು ಮತ್ತು ಹೈದರಾಬಾದ್ಗೆ ಬಿಡಲಾಗುವುದು. ಲಾಕ್ಡೌನ್ ಘೋಷಣೆಯಾದ ಬಳಿಕ ತಮ್ಮ ರಾಜ್ಯಗಳಿಗೆ ಹಿಂದಿರುಗಿದ್ದ ವಲಸೆ ಕಾರ್ಮಿಕರು ಈಗ ಉದ್ಯೋಗ ಹುಡುಕಲು ನಗರಗಳಿಗೆ ಮರಳುತ್ತಿದ್ದಾರೆ. ಅಂತಹ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಹೆಚ್ಚು ರೈಲುಗಳು ಕಾರ್ಯಾರಂಭ ಮಾಡಲಿವೆ.