ದೇಶದ 15ನೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಶುಭಾಶಯಗಳ ಮಹಾಪೂರ

ಬೆಂಗಳೂರು: ಒಡಿಶಾದ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು ಅವರು ದೇಶದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಮುರ್ಮು ಅವರಿಗೆ ಸಾಮಾಜಿಕ ಮಾಧ್ಯಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
ಸಂಸತ್ ಭವನದ 63ನೇ ಕೊಠಡಿಯಲ್ಲಿ ಮತ ಎಣಿಕೆ ನಡೆಯುತ್ತಿದೆ. ಮೂರನೇ ಸುತ್ತಿನ ಎಣಿಕೆಯ ಬಳಿಕ ಒಟ್ಟು ಮತಗಳ ಅರ್ಧದಷ್ಟು ಮತಗಳನ್ನು ದ್ರೌಪದಿ ಮುರ್ಮು ಗಳಿಸಿರುವುದಾಗಿ ಚುನಾವಣಾ ಅಧಿಕಾರಿ ಪಿ.ಸಿ. ಮೋದಿ ತಿಳಿಸಿದ್ದಾರೆ. ಗೆಲುವಿನ ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ.
ಇದನ್ನೂ ಓದಿ: ದೇಶದ 15ನೇ ರಾಷ್ಟ್ರಪತಿ ದ್ರೌಪದಿ ಮುರ್ಮು ಕುರಿತು ತಿಳಿಯಬೇಕಾದ ಪ್ರಮುಖ ವಿಚಾರಗಳು
ಹೀಗಾಗಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ದ್ರೌಪದಿ ಮುರ್ಮು ಉಳಿದುಕೊಂಡಿರುವ ನಿವಾಸಕ್ಕೆ ತೆರಳಿ ಹೂಗುಚ್ಛ ನೀಡಿ ಅಭಿನಂದಿಸಿದ್ದಾರೆ.
#WATCH | Prime Minister Narendra Modi greets and congratulates #DroupadiMurmu on being elected as the new President of the country. BJP national president JP Nadda is also present.
Visuals from her residence in Delhi. pic.twitter.com/c4ENPKOWys
— ANI (@ANI) July 21, 2022
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪಲ್ಹಾದ್ ಜೋಶಿ, ರಾಜ್ಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವರಾದ ಆರಗ ಜ್ಞಾನೇಂದ್ರ, ಮುರುಗೇಶ್ ನಿರಾಣಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಇನ್ನಿತರ ನಾಯಕರು ಸಾಮಾಜಿಕ ಮಾಧ್ಯಮಗಳಲ್ಲಿ ಶುಭ ಕೋರಿದ್ದಾರೆ.
ಭಾರತದ ರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಆಯ್ಕೆಯಾಗಿ ಹೊಸ ದಾಖಲೆ ಬರೆದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಹಾರ್ದಿಕ ಅಭಿನಂದನೆಗಳು. ಸಮಾಜದ ಕೆಳಸ್ತರದಿಂದ ಬಂದು ರಾಷ್ಟ್ರದ ಪರಮೋನ್ನತ ಹುದ್ದೆಯನ್ನು ಅವರು ಅಲಂಕರಿಸುತ್ತಿರುವುದು ನಮ್ಮ ಪ್ರಜಾಪ್ರಭುತ್ವದ ಯಶಸ್ಸಿನ ಸಂಕೇತ.
1/2 pic.twitter.com/3S8UQpLJSQ— Basavaraj S Bommai (@BSBommai) July 21, 2022
Hearty Congratulations to Smt Droupadi Murmu Ji on being elected as 15th President of India. A tribal woman becomes our Rashtrapathi - a glorious day for the nation.
#PresidentialElections2022— B.S.Yediyurappa (@BSYBJP) July 21, 2022
ದೇಶದ ನೂತನ ರಾಷ್ಟ್ರಪತಿಗಳಾಗಿ ಆಯ್ಕೆಯಾಗಿರುವಂತಹ ದ್ರೌಪದಿ ಮುರ್ಮು ಅವರಿಗೆ ಅಭಿನಂದನೆಗಳು.
ತಮ್ಮ ಕಾಲಾವಧಿಯಲ್ಲಿ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳನ್ನು ಉಳಿಸಿ, ಬೆಳೆಸುವ ಕೆಲಸವಾಗಲಿ ಎಂದು ಹಾರೈಸುತ್ತೇನೆ.#PresidentialElections2022 #Draupadi_Murmu pic.twitter.com/QQodpBMcFA— Siddaramaiah (@siddaramaiah) July 21, 2022
ಭವ್ಯ ಭಾರತದ 15 ನೇ ರಾಷ್ಟ್ರಪತಿಯಾಗಿ ಆಯ್ಕೆಯಾದ ಗೌರವಾನ್ವಿತ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಹಾರ್ದಿಕ ಅಭಿನಂದನೆಗಳು. pic.twitter.com/yWodOL6vlU
— DK Shivakumar (@DKShivakumar) July 21, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.