ನವದೆಹಲಿ: ಅಪರಾಧ ಕೃತ್ಯಗಳಲ್ಲಿ ಆರೋಪಿಗಳ ದೈಹಿಕ, ಜೈವಿಕ ಮಾದರಿ ಸಂಗ್ರಹಿಸಲು ಪೊಲೀಸರಿಗೆ ಅಧಿಕಾರವನ್ನು ನೀಡುವ ಅಪರಾಧ ಪ್ರಕ್ರಿಯೆ (ಗುರುತಿಸುವಿಕೆ) ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ.
‘ಕೈದಿಗಳ ಗುರುತಿಸುವಿಕೆ ಕಾಯ್ದೆ 1920’ರ ಬದಲಿಗೆ ಇದು ಜಾರಿಗೆ ಬರಲಿದೆ. ಈ ಮಸೂದೆಗೆ ಸಂಸತ್ತಿನ ಉಭಯ ಸದನಗಳು ಇದೇ ತಿಂಗಳ ಆರಂಭದಲ್ಲಿ ಅನುಮೋದನೆ ನೀಡಿದ್ದವು.
ಲೆಕ್ಕಪರಿಶೋಧಕರು, ಲೆಕ್ಕಾಧಿಕಾರಿಗಳು ಮತ್ತು ಕಂಪನಿ ಕಾರ್ಯದರ್ಶಿಗಳ ನಿರ್ವಹಣೆಗೆ ಸಂಬಂಧಿಸಿ ಕಾಯ್ದೆಯ ತಿದ್ದುಪಡಿ ಮಸೂದೆಗೂ ರಾಷ್ಟ್ರಪತಿ ರಾಮನಾಥ ಕೋವಿಂದ್ ಅನುಮೋದನೆ ನೀಡಿದ್ದಾರೆ.
ಈ ವೃತ್ತಿಗಳಿಗೆ ಸಂಬಂಧಿತ ಕೇಂದ್ರೀಯ ಸಂಸ್ಥೆಗಳು ಇನ್ನಷ್ಟು ಪಾರದರ್ಶಕವಾಗಿ ಕೆಲಸ ಮಾಡಲು ಮಸೂದೆ ಅವಕಾಶ ಕಲ್ಪಿಸಲಿದೆ ಎನ್ನಲಾಗಿದೆ. ಸಂಸತ್ತು ಈ ಮಸೂದೆಯನ್ನು ಏಪ್ರಿಲ್ 5ರಂದು ಅನುಮೋದಿಸಿತ್ತು.