<p><strong>ನವದೆಹಲಿ</strong>: ಗಣೇಶ ಚತುರ್ಥಿ ಪ್ರಯುಕ್ತ ರಾಷ್ಟ್ರದ ಜನರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಾಶಯಗಳನ್ನು ತಿಳಿಸಿದ್ದಾರೆ.</p>.<p>‘ಕೋವಿಡ್ ಹಿನ್ನೆಲೆಯಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಜನ ಹಬ್ಬ ಆಚರಿಸಬೇಕು‘ ಎಂದು ಅವರು ಕರೆ ನೀಡಿದ್ಧಾರೆ.</p>.<p>‘ಜ್ಞಾನ, ಸಮೃದ್ಧಿ ಹಾಗೂ ಅದೃಷ್ಟದ ಸಂಕೇತವಾದ ಗಣೇಶ ಹಬ್ಬವು ಸಂಭ್ರಮದಿಂದ ಕೂಡಿದ್ದು,ಈ ವರ್ಷ ಗಣೇಶ ಚತುರ್ಥಿಯ ಸಂದರ್ಭದಲ್ಲಿ, ಸಾಂಕ್ರಾಮಿಕ ರೋಗದ ವಿರುದ್ಧ ನಮ್ಮ ಹೋರಾಟವನ್ನು ಯಶಸ್ವಿಗೊಳಿಸಲು ಮತ್ತು ನಮ್ಮೆಲ್ಲರಿಗೂ ಸಂತೋಷ ಹಾಗೂ ಶಾಂತಿಯನ್ನು ದಯಪಾಲಿಸಲು ನಾವು ಗಣೇಶನನ್ನು ಪ್ರಾರ್ಥಿಸೋಣ‘ ಎಂದು ರಾಷ್ಟ್ರಪತಿ ಹೇಳಿದ್ದಾರೆ.</p>.<p>‘ಈ ಹಬ್ಬವನ್ನು ನಾವು ಉತ್ಸಾಹ ಮತ್ತು ಸಾಮರಸ್ಯದ ವಾತಾವರಣದಲ್ಲಿ ಕೋವಿಡ್ಗೆ ಸೂಕ್ತವಾದ ಮುನ್ನೆಚ್ಚರಿಕೆಯಿಂದ ಆಚರಿಸೋಣ‘ ಎಂದು ಅವರು ಹೇಳಿದ್ದಾರೆ. ವಿದೇಶಗಳಲ್ಲಿ ವಾಸಿಸುತ್ತಿರುವ ಭಾರತೀಯರಿಗೂರಾಷ್ಟ್ರಪತಿ ಗಣೇಶ ಹಬ್ಬದ ಶುಭಾಶಯ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಗಣೇಶ ಚತುರ್ಥಿ ಪ್ರಯುಕ್ತ ರಾಷ್ಟ್ರದ ಜನರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಾಶಯಗಳನ್ನು ತಿಳಿಸಿದ್ದಾರೆ.</p>.<p>‘ಕೋವಿಡ್ ಹಿನ್ನೆಲೆಯಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಜನ ಹಬ್ಬ ಆಚರಿಸಬೇಕು‘ ಎಂದು ಅವರು ಕರೆ ನೀಡಿದ್ಧಾರೆ.</p>.<p>‘ಜ್ಞಾನ, ಸಮೃದ್ಧಿ ಹಾಗೂ ಅದೃಷ್ಟದ ಸಂಕೇತವಾದ ಗಣೇಶ ಹಬ್ಬವು ಸಂಭ್ರಮದಿಂದ ಕೂಡಿದ್ದು,ಈ ವರ್ಷ ಗಣೇಶ ಚತುರ್ಥಿಯ ಸಂದರ್ಭದಲ್ಲಿ, ಸಾಂಕ್ರಾಮಿಕ ರೋಗದ ವಿರುದ್ಧ ನಮ್ಮ ಹೋರಾಟವನ್ನು ಯಶಸ್ವಿಗೊಳಿಸಲು ಮತ್ತು ನಮ್ಮೆಲ್ಲರಿಗೂ ಸಂತೋಷ ಹಾಗೂ ಶಾಂತಿಯನ್ನು ದಯಪಾಲಿಸಲು ನಾವು ಗಣೇಶನನ್ನು ಪ್ರಾರ್ಥಿಸೋಣ‘ ಎಂದು ರಾಷ್ಟ್ರಪತಿ ಹೇಳಿದ್ದಾರೆ.</p>.<p>‘ಈ ಹಬ್ಬವನ್ನು ನಾವು ಉತ್ಸಾಹ ಮತ್ತು ಸಾಮರಸ್ಯದ ವಾತಾವರಣದಲ್ಲಿ ಕೋವಿಡ್ಗೆ ಸೂಕ್ತವಾದ ಮುನ್ನೆಚ್ಚರಿಕೆಯಿಂದ ಆಚರಿಸೋಣ‘ ಎಂದು ಅವರು ಹೇಳಿದ್ದಾರೆ. ವಿದೇಶಗಳಲ್ಲಿ ವಾಸಿಸುತ್ತಿರುವ ಭಾರತೀಯರಿಗೂರಾಷ್ಟ್ರಪತಿ ಗಣೇಶ ಹಬ್ಬದ ಶುಭಾಶಯ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>