<p><strong>ನವದೆಹಲಿ</strong>: ಮುಂದಿನ 25 ವರ್ಷಗಳಲ್ಲಿ ಗತ ವೈಭವವನ್ನು ನೆನಪಿಸುವ ಮತ್ತು ಆಧುನಿಕತೆಯ ಪ್ರತಿ ಸುವರ್ಣ ಅಧ್ಯಾಯವನ್ನು ಒಳಗೊಂಡಿರುವ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣ ಮಾಡುವ ದೃಷ್ಟಿಯಿಂದ ಪ್ರತಿಯೊಬ್ಬ ಭಾರತೀಯನೂ ತಮ್ಮ ಕೈಲಾದಷ್ಟು ಶ್ರಮ ಹಾಕಿ ಪ್ರಯತ್ನಿಸಬೇಕೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.</p>.<p>ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾಡಿದ ಚೊಚ್ಚಲ ಭಾಷಣದಲ್ಲಿ, ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದಿಂದ ಶತಮಾನೋತ್ಸವದವರೆಗಿನ 25 ವರ್ಷಗಳ ಅವಧಿಯನ್ನು ಸರ್ಕಾರ ಅಭಿವೃದ್ಧಿಯ 'ಅಮೃತ ಕಾಲ' ಎಂದು ಸರ್ಕಾರ ಬಣ್ಣಿಸಿದೆ. ಈ ಸಮಯವು 'ಆತ್ಮನಿರ್ಭರ' (ಸ್ವಾವಲಂಬಿ) ದೇಶದ ನಿರ್ಮಾಣ ಮತ್ತು ಅದರ ಮಾನವೀಯ ಜವಾಬ್ದಾರಿಗಳನ್ನು ಪೂರೈಸುವ ಅವಧಿಯಾಗಿದೆ ಎಂದು ಮುರ್ಮು ಹೇಳಿದರು.</p>.<p>ಈ ಸಮಯವು ಭಾರತವನ್ನು ಬಡತನದಿಂದ ಮುಕ್ತಗೊಳಿಸುವ ಮತ್ತು ದೇಶವನ್ನು ಮುನ್ನಡೆಸುವ ಯುವಕರು, ಮಹಿಳೆಯರು ಮತ್ತು ಮಧ್ಯಮ ವರ್ಗವನ್ನು ಸಮೃದ್ಧಗೊಳಿಸುವ ಅವಧಿಯಾಗಿದೆ ಎಂದು ಅವರು ಹೇಳಿದರು.</p>.<p>ದೇಶವು ಇಂದು ನಿರ್ಭೀತ, ಖಚಿತ ನಿರ್ಧಾರಗಳನ್ನು ಕೈಗೊಳ್ಳುವ ಸರ್ಕಾರವನ್ನು ಹೊಂದಿದೆ. ನರೇಂದ್ರ ಮೋದಿ ನೇತೃತ್ವದ 9 ವರ್ಷಗಳ ಸರ್ಕಾರದ ಅವಧಿಯಲ್ಲಿ ದೇಶವು ಹಲವು ಧನಾತ್ಮಕ ಬದಲಾವಣೆಗಳನ್ನು ಕಂಡಿದೆ. ದೊಡ್ಡ ಬದಲಾವಣೆ ಎಂದರೆ, ಪ್ರತಿಯೊಬ್ಬ ಭಾರತೀಯರಲ್ಲೂ ಆತ್ಮವಿಶ್ವಾಸ ಉತ್ತುಂಗಕ್ಕೆ ಏರಿದೆ. ಜಗತ್ತು ಭಾರತದತ್ತ ನೋಡುವ ಮನಸ್ಥಿತಿ ಬದಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ಭಾರತವು ಈ ಮೊದಲು ತನ್ನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಬೇರೆ ದೇಶಗಳ ಮೇಲೆ ಅವಲಂಬಿತವಾಗಿತ್ತು. ಆದರೆ, ಈಗ ಬೇರೆ ದೇಶಗಳು ಜಾಗತಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಭಾರತದ ಮೇಲೆ ಅವಲಂಬಿತವಾಗಿವೆ ಎಂದು ಅವರು ಹೇಳಿದ್ದಾರೆ.</p>.<p>ದಶಕಗಳಿಂದ ಕೊರತೆ ಇದ್ದ ಮೂಲಭೂತ ಸೌಕರ್ಯಗಳನ್ನು ಜನರಿಗೆ ನೀಡಲಾಗುತ್ತಿದೆ. ಬಹಳ ದಿನಗಳಿಂದ ಸಮಾಜವು ನಿರೀಕ್ಷಿಸುತ್ತಿದ್ದ ಆಧುನಿಕ ಮೂಲ ಸೌಕರ್ಯವನ್ನು ದೇಶದಾದ್ಯಂತ ನಿರ್ಮಾಣ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮುಂದಿನ 25 ವರ್ಷಗಳಲ್ಲಿ ಗತ ವೈಭವವನ್ನು ನೆನಪಿಸುವ ಮತ್ತು ಆಧುನಿಕತೆಯ ಪ್ರತಿ ಸುವರ್ಣ ಅಧ್ಯಾಯವನ್ನು ಒಳಗೊಂಡಿರುವ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣ ಮಾಡುವ ದೃಷ್ಟಿಯಿಂದ ಪ್ರತಿಯೊಬ್ಬ ಭಾರತೀಯನೂ ತಮ್ಮ ಕೈಲಾದಷ್ಟು ಶ್ರಮ ಹಾಕಿ ಪ್ರಯತ್ನಿಸಬೇಕೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.</p>.<p>ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾಡಿದ ಚೊಚ್ಚಲ ಭಾಷಣದಲ್ಲಿ, ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದಿಂದ ಶತಮಾನೋತ್ಸವದವರೆಗಿನ 25 ವರ್ಷಗಳ ಅವಧಿಯನ್ನು ಸರ್ಕಾರ ಅಭಿವೃದ್ಧಿಯ 'ಅಮೃತ ಕಾಲ' ಎಂದು ಸರ್ಕಾರ ಬಣ್ಣಿಸಿದೆ. ಈ ಸಮಯವು 'ಆತ್ಮನಿರ್ಭರ' (ಸ್ವಾವಲಂಬಿ) ದೇಶದ ನಿರ್ಮಾಣ ಮತ್ತು ಅದರ ಮಾನವೀಯ ಜವಾಬ್ದಾರಿಗಳನ್ನು ಪೂರೈಸುವ ಅವಧಿಯಾಗಿದೆ ಎಂದು ಮುರ್ಮು ಹೇಳಿದರು.</p>.<p>ಈ ಸಮಯವು ಭಾರತವನ್ನು ಬಡತನದಿಂದ ಮುಕ್ತಗೊಳಿಸುವ ಮತ್ತು ದೇಶವನ್ನು ಮುನ್ನಡೆಸುವ ಯುವಕರು, ಮಹಿಳೆಯರು ಮತ್ತು ಮಧ್ಯಮ ವರ್ಗವನ್ನು ಸಮೃದ್ಧಗೊಳಿಸುವ ಅವಧಿಯಾಗಿದೆ ಎಂದು ಅವರು ಹೇಳಿದರು.</p>.<p>ದೇಶವು ಇಂದು ನಿರ್ಭೀತ, ಖಚಿತ ನಿರ್ಧಾರಗಳನ್ನು ಕೈಗೊಳ್ಳುವ ಸರ್ಕಾರವನ್ನು ಹೊಂದಿದೆ. ನರೇಂದ್ರ ಮೋದಿ ನೇತೃತ್ವದ 9 ವರ್ಷಗಳ ಸರ್ಕಾರದ ಅವಧಿಯಲ್ಲಿ ದೇಶವು ಹಲವು ಧನಾತ್ಮಕ ಬದಲಾವಣೆಗಳನ್ನು ಕಂಡಿದೆ. ದೊಡ್ಡ ಬದಲಾವಣೆ ಎಂದರೆ, ಪ್ರತಿಯೊಬ್ಬ ಭಾರತೀಯರಲ್ಲೂ ಆತ್ಮವಿಶ್ವಾಸ ಉತ್ತುಂಗಕ್ಕೆ ಏರಿದೆ. ಜಗತ್ತು ಭಾರತದತ್ತ ನೋಡುವ ಮನಸ್ಥಿತಿ ಬದಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ಭಾರತವು ಈ ಮೊದಲು ತನ್ನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಬೇರೆ ದೇಶಗಳ ಮೇಲೆ ಅವಲಂಬಿತವಾಗಿತ್ತು. ಆದರೆ, ಈಗ ಬೇರೆ ದೇಶಗಳು ಜಾಗತಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಭಾರತದ ಮೇಲೆ ಅವಲಂಬಿತವಾಗಿವೆ ಎಂದು ಅವರು ಹೇಳಿದ್ದಾರೆ.</p>.<p>ದಶಕಗಳಿಂದ ಕೊರತೆ ಇದ್ದ ಮೂಲಭೂತ ಸೌಕರ್ಯಗಳನ್ನು ಜನರಿಗೆ ನೀಡಲಾಗುತ್ತಿದೆ. ಬಹಳ ದಿನಗಳಿಂದ ಸಮಾಜವು ನಿರೀಕ್ಷಿಸುತ್ತಿದ್ದ ಆಧುನಿಕ ಮೂಲ ಸೌಕರ್ಯವನ್ನು ದೇಶದಾದ್ಯಂತ ನಿರ್ಮಾಣ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>