ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಎರಡನೇ ವರ್ಷದ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಗೌರವ ಸಲ್ಲಿಸಿದರು.
ಇಂದು ಮುಂಜಾನೆ ದೆಹಲಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿ ‘ಸದೈವ್ ಅಟಲ್’ಗೆ ಭೇಟಿ ನೀಡಿ ಪುಷ್ಪಾರ್ಚನೆ ಮಾಡುವ ಮೂಲಕ ಅಗಲಿದ ನಾಯಕನಿಗೆ ಗೌರವ ಸಲ್ಲಿಸಿದರು.
#WATCH Delhi: President Ram Nath Kovind, Vice President M Venkaiah Naidu & Prime Minister Narendra Modi pay tribute to former PM #AtalBihariVajpayee, on his death anniversary today at 'Sadaiv Atal' - the memorial of Atal Bihari Vajpayee. pic.twitter.com/pIaYOZFIMZ
— ANI (@ANI) August 16, 2020
ಇವರೊಂದಿಗೆ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಇತರೆ ಗಣ್ಯರು ಭೇಟಿ ನೀಡಿ ಗೌರವ ಸಲ್ಲಿಸಿದರು. ವಾಯಪೇಯಿ ಅವರ ಪುತ್ರಿ ನಮಿತಾ ಕೌಲ್ ಭಟ್ಟಾಚಾರ್ಯ ಮತ್ತು ಮೊಮ್ಮಗಳಾದ ನಿಹಾರಿಕಾ ಕೂಡ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.
Delhi: BJP National President JP Nadda paid tribute to former PM #AtalBihariVajpayee, on his death anniversary today at 'Sadaiv Atal' - the memorial of Atal Bihari Vajpayee. pic.twitter.com/EsVc4szhSu
— ANI (@ANI) August 16, 2020
ದೀರ್ಘಕಾಲದ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ದೇಶದ ಪ್ರಮುಖ ನಾಯಕರಲ್ಲಿ ಒಬ್ಬರು ಮತ್ತು ಭಾರತೀಯ ಜನತಾ ಪಕ್ಷದ ಸ್ಥಾಪಕ ಸದಸ್ಯರಾದ ವಾಜಪೇಯಿ ಅವರು ಆಗಸ್ಟ್ 16, 2018 ರಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್) ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.
ಇಂದು ಬೆಳಿಗ್ಗೆ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ, ದೇಶದ ಪ್ರಗತಿಗಾಗಿ 'ಅತ್ಯುತ್ತಮ ಸೇವೆ' ಮಾಡಿದ್ದಕ್ಕಾಗಿ ಮಾಜಿ ಪ್ರಧಾನಿಯನ್ನು ನೆನಪಿಸಿಕೊಂಡರು. ವಾಜಪೇಯಿ ಅವರ ವೃತ್ತಿಜೀವನದ ಮಹತ್ವದ ಕ್ಷಣಗಳನ್ನು ಸೆರೆಹಿಡಿದಿರುವ ವಿಡಿಯೊ ಕ್ಲಿಪ್ ಅನ್ನು ಕೂಡ ಹಂಚಿಕೊಂಡಿದ್ದರು.
Tributes to beloved Atal Ji on his Punya Tithi. India will always remember his outstanding service and efforts towards our nation’s progress. pic.twitter.com/ZF0H3vEPVd
— Narendra Modi (@narendramodi) August 16, 2020
ಎರಡನೇ ವರ್ಷದ ಪುಣ್ಯತಿಥಿ ಅಂಗವಾಗಿ ಪ್ರೀತಿಯ ಅಟಲ್ ಜಿ ಅವರಿಗೆ ಗೌರವ ಸಲ್ಲಿಸುತ್ತೇನೆ. ಅತ್ಯುತ್ತಮ ಸೇವೆ ಮತ್ತು ನಮ್ಮ ರಾಷ್ಟ್ರದ ಪ್ರಗತಿಗೆ ಮಾಡಿದ ಪ್ರಯತ್ನಗಳನ್ನು ಯಾವಾಗಲೂ ಭಾರತವೂ ನೆನಪಿಸಿಕೊಳ್ಳುತ್ತದೆ ಎಂದು ಟ್ವೀಟ್ ಮಾಡಿದ್ದರು.
ಗೃಹ ಸಚಿವ ಅಮಿತ್ ಶಾ ಕೂಡ ಟ್ವೀಟ್ ಮಾಡಿ, 'ಇಂದು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಕೇಂದ್ರ ಸರ್ಕಾರವು ಅಟಲ್ ಜಿ ಅವರ ಆಲೋಚನೆಗಳನ್ನು ಇಟ್ಟುಕೊಳ್ಳುವ ಮೂಲಕ ಉತ್ತಮ ಆಡಳಿತ ಮತ್ತು ಗರೀಬ್ ಕಲ್ಯಾಣದ ಹಾದಿಯಲ್ಲಿದೆ. ಭಾರತವನ್ನು ವಿಶ್ವದ ಮಹಾಶಕ್ತಿಯನ್ನಾಗಿ ಮಾಡಲು ಬದ್ಧವಾಗಿದೆ. ಇಂದು ಗೌರವಾನ್ವಿತ ಅಟಲ್ ಬಿಹಾರಿ ವಾಜಪೇಯಿ ಅವರ ಎರಡನೇ ವರ್ಷದ ಪುಣ್ಯತಿಥಿ ಅಂಗವಾಗಿ ಅವರಿಗೆ ಕೋಟಿ ಕೋಟಿ ವಂದನೆಗಳು' ಎಂದು ಟ್ವೀಟ್ ಮಾಡಿದ್ದಾರೆ.
आज प्रधानमंत्री श्री @NarendraModi जी के नेतृत्व में केंद्र सरकार अटल जी के विचारों को केंद्र में रखकर सुशासन व गरीब कल्याण के मार्ग पर अग्रसर है और भारत को विश्व में एक महाशक्ति बनाने के लिए कटिबद्ध है।
— Amit Shah (@AmitShah) August 16, 2020
श्रद्धेय अटल बिहारी वाजपेयी जी की पुण्यतिथि पर उन्हें कोटि-कोटि वंदन।
1998-2004ರವರೆಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ಸರ್ಕಾರವನ್ನು ಮುನ್ನಡೆಸಿದ ವಾಜಪೇಯಿ, ಬಿಜೆಪಿಯಿಂದ ರಾಷ್ಟ್ರದ ಪ್ರಧಾನ ಮಂತ್ರಿಯಾದ ಮೊದಲ ನಾಯಕ. ಅವರು ಮೂರು ಭಾರಿ ದೇಶದ ಪ್ರಧಾನಿಯಾಗಿದ್ದರು. 1996 ರಲ್ಲಿ ಮತ್ತು 1998 ರಿಂದ 2004 ರ ನಡುವೆ ಎರಡು ಅವಧಿಗೆ ಪ್ರಧಾನಿಯಾಗಿ ಸೇವೇ ಸಲ್ಲಿಸಿದರು.
ಡಿಸೆಂಬರ್ 25 ರ ಅವರ ಅವರ ಜನ್ಮದಿನವನ್ನು ಪಕ್ಷವು 'ಉತ್ತಮ ಆಡಳಿತ ದಿನ' ಎಂದು ಆಚರಿಸುತ್ತದೆ. 2014 ರಲ್ಲಿ ಅವರಿಗೆ ಭಾರತ ರತ್ನ ದೊರಕಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.