<p><strong>ನವದೆಹಲಿ:</strong> ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಬಾಂಗ್ಲಾದೇಶದ 50ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಆ ದೇಶದ ಜನರಿಗೆ ಶುಭಾಶಯ ತಿಳಿಸಿದ್ದಾರೆ.</p>.<p>ʼನಿಮ್ಮ ರಾಷ್ಟ್ರೀಯ ದಿನಾಚರಣೆಯ ಅಂಗವಾಗಿ ಘನ ಸರ್ಕಾರ ಮತ್ತು ಬಾಂಗ್ಲಾದೇಶದ ಜನರಿಗೆ ಭಾರತ ಮತ್ತು ನನ್ನ ಪರವಾಗಿ ಶುಭಾಶಯಗಳನ್ನು ಕೋರುತ್ತೇನೆ. 50 ವರ್ಷಗಳಅನುಕರಣೀಯಹಾಗೂ ಅನನ್ಯ ದ್ವಿಪಕ್ಷೀಯ ಸಂಬಂಧವನ್ನು ಭಾರತ ಮತ್ತು ಬಾಂಗ್ಲಾದೇಶ ಆಚರಿಸುತ್ತಿವೆʼ ಎಂದು ತಿಳಿಸಿದ್ದಾರೆ.</p>.<p>ʼಈ ವರ್ಷ, ಸ್ವಾತಂತ್ರ್ಯ ಸಮರದ ಗೆಲುವಿನ ಸುವರ್ಣ ಮಹೋತ್ಸವಆಚರಣೆಯಿಂದನಾನು ಖುಷಿಪಟ್ಟಿದ್ದೇನೆ. 20ನೇ ಶತಮಾನದ ಅತಿದೊಡ್ಡ ಆಡಳಿತಗಾರ ಬಂಗಬಂಧು ಶೇಖ್ ಮುಜಿಬುರ್ ರೆಹಮಾನ್ ಅವರ ಸ್ಮರಣೀಯ ಜನ್ಮ ಶತಮಾನೋತ್ಸವದ ಆಚರಣೆಯಿಂದ ಅದು ಮತ್ತಷ್ಟು ಹೆಚ್ಚಾಗಿದೆʼ ಎಂದಿದ್ದಾರೆ.</p>.<p>ಉಭಯ ದೇಶಗಳು ವಿವಿಧ ಕ್ಷೇತ್ರಗಳಲ್ಲಿ ಸಹಕಾರ ಹೊಂದಿವೆ ಎಂದಿರುವಕೋವಿಂದ್,ʼಹಲವು ಕಾರ್ಯಕ್ರಮಗಳು ಮತ್ತು ನಿಮ್ಮ ಸರ್ಕಾರದ ಸಹಯೋಗದಲ್ಲಿನಮ್ಮ ಸರ್ಕಾರವೂ ಬಂಗಬಂಧು ಅವರ ಜನ್ಮ ಶತಮಾನೋತ್ಸವವನ್ನು ಆಚರಿಸಲಿದೆʼ ಎಂದೂ ಹೇಳಿದ್ದಾರೆ.</p>.<p>ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಕೋವಿಡ್-19 ಸಾಂಕ್ರಾಮಿಕದ ನಂತರ ಅವರು ಕೈಗೊಳ್ಳುತ್ತಿರುವ ಮೊದಲ ವಿದೇಶಿ ಪ್ರಯಾಣ ಇದಾಗಿದೆ.</p>.<p>ಶೇಖ್ ಮುಜಿಬುರ್ ರಹಮಾನ್ ಅವರು 1971ರ ಮಾರ್ಚ್ 26ರಂದು ಬಾಂಗ್ಲಾದೇಶವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಿಸಿದ್ದರು. ಇದುಆ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ನಾಂದಿ ಹಾಡಿತ್ತು. ಪಾಕಿಸ್ತಾನದ ವಿರುದ್ಧ ನಡೆದ ಈ ಯುದ್ಧದಲ್ಲಿ ಭಾರತವು ಬಾಂಗ್ಲಾ ಸೇನೆಗೆ ಬೆಂಬಲ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಬಾಂಗ್ಲಾದೇಶದ 50ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಆ ದೇಶದ ಜನರಿಗೆ ಶುಭಾಶಯ ತಿಳಿಸಿದ್ದಾರೆ.</p>.<p>ʼನಿಮ್ಮ ರಾಷ್ಟ್ರೀಯ ದಿನಾಚರಣೆಯ ಅಂಗವಾಗಿ ಘನ ಸರ್ಕಾರ ಮತ್ತು ಬಾಂಗ್ಲಾದೇಶದ ಜನರಿಗೆ ಭಾರತ ಮತ್ತು ನನ್ನ ಪರವಾಗಿ ಶುಭಾಶಯಗಳನ್ನು ಕೋರುತ್ತೇನೆ. 50 ವರ್ಷಗಳಅನುಕರಣೀಯಹಾಗೂ ಅನನ್ಯ ದ್ವಿಪಕ್ಷೀಯ ಸಂಬಂಧವನ್ನು ಭಾರತ ಮತ್ತು ಬಾಂಗ್ಲಾದೇಶ ಆಚರಿಸುತ್ತಿವೆʼ ಎಂದು ತಿಳಿಸಿದ್ದಾರೆ.</p>.<p>ʼಈ ವರ್ಷ, ಸ್ವಾತಂತ್ರ್ಯ ಸಮರದ ಗೆಲುವಿನ ಸುವರ್ಣ ಮಹೋತ್ಸವಆಚರಣೆಯಿಂದನಾನು ಖುಷಿಪಟ್ಟಿದ್ದೇನೆ. 20ನೇ ಶತಮಾನದ ಅತಿದೊಡ್ಡ ಆಡಳಿತಗಾರ ಬಂಗಬಂಧು ಶೇಖ್ ಮುಜಿಬುರ್ ರೆಹಮಾನ್ ಅವರ ಸ್ಮರಣೀಯ ಜನ್ಮ ಶತಮಾನೋತ್ಸವದ ಆಚರಣೆಯಿಂದ ಅದು ಮತ್ತಷ್ಟು ಹೆಚ್ಚಾಗಿದೆʼ ಎಂದಿದ್ದಾರೆ.</p>.<p>ಉಭಯ ದೇಶಗಳು ವಿವಿಧ ಕ್ಷೇತ್ರಗಳಲ್ಲಿ ಸಹಕಾರ ಹೊಂದಿವೆ ಎಂದಿರುವಕೋವಿಂದ್,ʼಹಲವು ಕಾರ್ಯಕ್ರಮಗಳು ಮತ್ತು ನಿಮ್ಮ ಸರ್ಕಾರದ ಸಹಯೋಗದಲ್ಲಿನಮ್ಮ ಸರ್ಕಾರವೂ ಬಂಗಬಂಧು ಅವರ ಜನ್ಮ ಶತಮಾನೋತ್ಸವವನ್ನು ಆಚರಿಸಲಿದೆʼ ಎಂದೂ ಹೇಳಿದ್ದಾರೆ.</p>.<p>ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಕೋವಿಡ್-19 ಸಾಂಕ್ರಾಮಿಕದ ನಂತರ ಅವರು ಕೈಗೊಳ್ಳುತ್ತಿರುವ ಮೊದಲ ವಿದೇಶಿ ಪ್ರಯಾಣ ಇದಾಗಿದೆ.</p>.<p>ಶೇಖ್ ಮುಜಿಬುರ್ ರಹಮಾನ್ ಅವರು 1971ರ ಮಾರ್ಚ್ 26ರಂದು ಬಾಂಗ್ಲಾದೇಶವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಿಸಿದ್ದರು. ಇದುಆ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ನಾಂದಿ ಹಾಡಿತ್ತು. ಪಾಕಿಸ್ತಾನದ ವಿರುದ್ಧ ನಡೆದ ಈ ಯುದ್ಧದಲ್ಲಿ ಭಾರತವು ಬಾಂಗ್ಲಾ ಸೇನೆಗೆ ಬೆಂಬಲ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>