<p><strong>ನವದೆಹಲಿ:</strong> ಬೋಧನೆಯಲ್ಲಿ ಹೊಸ ವಿಧಾನವನ್ನು ಅಳವಡಿಸಿಕೊಳ್ಳುವಲ್ಲಿ ಕೊಡುಗೆ ನೀಡಿರುವ 44 ಶಿಕ್ಷಕರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾನುವಾರ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದರು.</p>.<p>ಶಾಲೆಯ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಜೊತೆಗೆ ವಿದ್ಯಾರ್ಥಿಗಳ ಬದುಕನ್ನೂ ಹಸನುಗೊಳಿಸುವ ಅದ್ವಿತೀಯ ಸಾಧನೆ, ಗಣನೀಯ ಸೇವೆ ಸಲ್ಲಿಸಿದ ಶಿಕ್ಷಕರನ್ನು ಗುರುತಿಸಿ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.</p>.<p>'ಪ್ರತಿ ಮಗುವೂ ಭಿನ್ನ ಸಾಮರ್ಥ್ಯ ಮತ್ತು ಪ್ರತಿಭೆಯನ್ನು ಹೊಂದಿರುತ್ತದೆ. ಶಿಕ್ಷಕರು ವಿದ್ಯಾರ್ಥಿಗಳ ಭಿನ್ನ ಅಗತ್ಯಗಳು ಮತ್ತು ಆಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಸರ್ವತೋಮುಖ ಬೆಳವಣಿಗೆಯತ್ತ ಚಿತ್ತ ಹರಿಸಬೇಕಾಗುತ್ತದೆ' ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದರು.</p>.<p>'ವಿದ್ಯಾರ್ಥಿಗಳಲ್ಲಿ ಅಧ್ಯಯನದ ಬಗ್ಗೆ ಆಸಕ್ತಿ ಮೂಡಿಸುವಂತೆ ಮಾಡುವುದು ಶಿಕ್ಷಕರ ಕರ್ತವ್ಯವಾಗಿರುತ್ತದೆ. ಸೂಕ್ಷ್ಮ ವ್ಯಕ್ತಿತ್ವದ ಶಿಕ್ಷಕರು ಅವರ ನಡೆ, ವರ್ತನೆ ಹಾಗೂ ಬೋಧನೆಯ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಬಹುದು' ಎಂದರು.</p>.<p>1958ರಲ್ಲಿ ಶಿಕ್ಷಕರ ರಾಷ್ಟ್ರೀಯ ಪ್ರಶಸ್ತಿ ಸ್ಥಾಪಿಸಲಾಯಿತು. 60ರ ದಶಕದ ಮಧ್ಯದಿಂದ ಮಾಜಿ ರಾಷ್ಟ್ರಪತಿ, ಶಿಕ್ಷಣತಜ್ಞ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನುಮದಿನವಾದ ಸೆಪ್ಟೆಂಬರ್ 5ರಂದು ಪ್ರತಿ ವರ್ಷ ಪ್ರಶಸ್ತಿ ನೀಡಲಾಗುತ್ತಿದೆ.</p>.<p>2021ರಲ್ಲಿ ಆನ್ಲೈನ್ ಮೂಲಕ ಸ್ವಯಂ ನಾಮನಿರ್ದೇಶನ ಪ್ರಕ್ರಿಯೆ ನಡೆಸಲಾಗಿದೆ. ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟ–ಮೂರು ಹಂತಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದೆ.</p>.<p>ಈ ಬಾರಿ ವರ್ಚುವಲ್ ಆಗಿ ಪ್ರಶಸ್ತಿ ಸಮಾರಂಭವನ್ನು ನಡೆಸಲಾಯಿತು. ರಾಷ್ಟ್ರದಾದ್ಯಂತ ಆಯ್ಕೆಯಾದ 44 ಶಿಕ್ಷಕರ ಕುರಿತು ಸಾಕ್ಷ್ಯಚಿತ್ರಗಳನ್ನು ಪ್ರಸಾರ ಮಾಡಲಾಯಿತು. </p>.<p><strong>ಕರ್ನಾಟಕದಿಂದ ಒಬ್ಬರು ಮಾತ್ರ ಆಯ್ಕೆ</strong></p>.<p>ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ ದೊಡ್ಡಬನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಸಿ.ಎಂ. ನಾಗರಾಜ ಅವರು ಶಿಕ್ಷಕರಿಗೆ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಬಾರಿ ಈ ಗೌರವಕ್ಕೆ ಪಾತ್ರರಾದ ರಾಜ್ಯದ ಏಕೈಕ ಶಿಕ್ಷಕ ಇವರು.</p>.<p>15 ವರ್ಷದಿಂದ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಅವರು, ದೊಡ್ಡಬನಹಳ್ಳಿ ಶಾಲೆಯಲ್ಲಿ 2018ರಿಂದ ಕೆಲಸ ಮಾಡುತ್ತಿದ್ದಾರೆ. ಪಾಠ ಬೋಧನೆ ಮಾತ್ರವಲ್ಲದೆ, ಸಮುದಾಯ ಅಭಿವೃದ್ಧಿ ಕಾರ್ಯಗಳಲ್ಲಿಯೂ ಅವರು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಶಾಲೆಗೆ ಎಲ್ಇಡಿ ಟಿವಿ, ಸೌರಫಲಕ, ಸೌರದೀಪಗಳನ್ನು ದೇಣಿಗೆಯಾಗಿ ನೀಡಿ ವಿದ್ಯಾರ್ಥಿಗಳಿಗೆ ಅನುಕೂಲವನ್ನೂ ಕಲ್ಪಿಸಿದ್ದಾರೆ.</p>.<p>ಎರೇಹುಳು ಘಟಕದ ಬಗ್ಗೆ ಅವರು ಮಂಡಿಸಿದ ವಿಷಯವು ರಾಷ್ಟ್ರೀಯ, ಅಂತರರಾಷ್ಟ್ರೀಯ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬೋಧನೆಯಲ್ಲಿ ಹೊಸ ವಿಧಾನವನ್ನು ಅಳವಡಿಸಿಕೊಳ್ಳುವಲ್ಲಿ ಕೊಡುಗೆ ನೀಡಿರುವ 44 ಶಿಕ್ಷಕರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾನುವಾರ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದರು.</p>.<p>ಶಾಲೆಯ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಜೊತೆಗೆ ವಿದ್ಯಾರ್ಥಿಗಳ ಬದುಕನ್ನೂ ಹಸನುಗೊಳಿಸುವ ಅದ್ವಿತೀಯ ಸಾಧನೆ, ಗಣನೀಯ ಸೇವೆ ಸಲ್ಲಿಸಿದ ಶಿಕ್ಷಕರನ್ನು ಗುರುತಿಸಿ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.</p>.<p>'ಪ್ರತಿ ಮಗುವೂ ಭಿನ್ನ ಸಾಮರ್ಥ್ಯ ಮತ್ತು ಪ್ರತಿಭೆಯನ್ನು ಹೊಂದಿರುತ್ತದೆ. ಶಿಕ್ಷಕರು ವಿದ್ಯಾರ್ಥಿಗಳ ಭಿನ್ನ ಅಗತ್ಯಗಳು ಮತ್ತು ಆಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಸರ್ವತೋಮುಖ ಬೆಳವಣಿಗೆಯತ್ತ ಚಿತ್ತ ಹರಿಸಬೇಕಾಗುತ್ತದೆ' ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದರು.</p>.<p>'ವಿದ್ಯಾರ್ಥಿಗಳಲ್ಲಿ ಅಧ್ಯಯನದ ಬಗ್ಗೆ ಆಸಕ್ತಿ ಮೂಡಿಸುವಂತೆ ಮಾಡುವುದು ಶಿಕ್ಷಕರ ಕರ್ತವ್ಯವಾಗಿರುತ್ತದೆ. ಸೂಕ್ಷ್ಮ ವ್ಯಕ್ತಿತ್ವದ ಶಿಕ್ಷಕರು ಅವರ ನಡೆ, ವರ್ತನೆ ಹಾಗೂ ಬೋಧನೆಯ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಬಹುದು' ಎಂದರು.</p>.<p>1958ರಲ್ಲಿ ಶಿಕ್ಷಕರ ರಾಷ್ಟ್ರೀಯ ಪ್ರಶಸ್ತಿ ಸ್ಥಾಪಿಸಲಾಯಿತು. 60ರ ದಶಕದ ಮಧ್ಯದಿಂದ ಮಾಜಿ ರಾಷ್ಟ್ರಪತಿ, ಶಿಕ್ಷಣತಜ್ಞ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನುಮದಿನವಾದ ಸೆಪ್ಟೆಂಬರ್ 5ರಂದು ಪ್ರತಿ ವರ್ಷ ಪ್ರಶಸ್ತಿ ನೀಡಲಾಗುತ್ತಿದೆ.</p>.<p>2021ರಲ್ಲಿ ಆನ್ಲೈನ್ ಮೂಲಕ ಸ್ವಯಂ ನಾಮನಿರ್ದೇಶನ ಪ್ರಕ್ರಿಯೆ ನಡೆಸಲಾಗಿದೆ. ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟ–ಮೂರು ಹಂತಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದೆ.</p>.<p>ಈ ಬಾರಿ ವರ್ಚುವಲ್ ಆಗಿ ಪ್ರಶಸ್ತಿ ಸಮಾರಂಭವನ್ನು ನಡೆಸಲಾಯಿತು. ರಾಷ್ಟ್ರದಾದ್ಯಂತ ಆಯ್ಕೆಯಾದ 44 ಶಿಕ್ಷಕರ ಕುರಿತು ಸಾಕ್ಷ್ಯಚಿತ್ರಗಳನ್ನು ಪ್ರಸಾರ ಮಾಡಲಾಯಿತು. </p>.<p><strong>ಕರ್ನಾಟಕದಿಂದ ಒಬ್ಬರು ಮಾತ್ರ ಆಯ್ಕೆ</strong></p>.<p>ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ ದೊಡ್ಡಬನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಸಿ.ಎಂ. ನಾಗರಾಜ ಅವರು ಶಿಕ್ಷಕರಿಗೆ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಬಾರಿ ಈ ಗೌರವಕ್ಕೆ ಪಾತ್ರರಾದ ರಾಜ್ಯದ ಏಕೈಕ ಶಿಕ್ಷಕ ಇವರು.</p>.<p>15 ವರ್ಷದಿಂದ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಅವರು, ದೊಡ್ಡಬನಹಳ್ಳಿ ಶಾಲೆಯಲ್ಲಿ 2018ರಿಂದ ಕೆಲಸ ಮಾಡುತ್ತಿದ್ದಾರೆ. ಪಾಠ ಬೋಧನೆ ಮಾತ್ರವಲ್ಲದೆ, ಸಮುದಾಯ ಅಭಿವೃದ್ಧಿ ಕಾರ್ಯಗಳಲ್ಲಿಯೂ ಅವರು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಶಾಲೆಗೆ ಎಲ್ಇಡಿ ಟಿವಿ, ಸೌರಫಲಕ, ಸೌರದೀಪಗಳನ್ನು ದೇಣಿಗೆಯಾಗಿ ನೀಡಿ ವಿದ್ಯಾರ್ಥಿಗಳಿಗೆ ಅನುಕೂಲವನ್ನೂ ಕಲ್ಪಿಸಿದ್ದಾರೆ.</p>.<p>ಎರೇಹುಳು ಘಟಕದ ಬಗ್ಗೆ ಅವರು ಮಂಡಿಸಿದ ವಿಷಯವು ರಾಷ್ಟ್ರೀಯ, ಅಂತರರಾಷ್ಟ್ರೀಯ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>