<p class="title"><strong>ನವದೆಹಲಿ:</strong> ದಾಖಲೆಯ ಪ್ರಮಾಣದಲ್ಲಿ ಕೃಷಿ ಉತ್ಪನ್ನಗಳ ಖರೀದಿ, ದೇಶದ ಆಂತರಿಕ ಭದ್ರತೆಗೆ ಕ್ರಮ, ಕೋವಿಡ್ನ ಪರಿಣಾಮಕಾರಿ ನಿರ್ವಹಣೆ ಸೇರಿ ಹಲವು ‘ಸಾಧನೆ’ಗಳನ್ನು ಪಟ್ಟಿಮಾಡಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್, ಅಭಿವೃದ್ಧಿ ಗುರಿ ಸಾಧನೆ ಹಾದಿಯಲ್ಲಿ ಈ ಎಲ್ಲವು ‘ಸಮಷ್ಟಿ ಸಾಧನೆಗಳು’ ಎಂದೂ ಶ್ಲಾಘಿಸಿದರು.</p>.<p class="title">ಸೋಮವಾರ ಬಜೆಟ್ ಅಧಿವೇಶನಕ್ಕೆ ಚಾಲನೆ ನೀಡಿ, ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾಡಿದ 50 ನಿಮಿಷದ ಭಾಷಣದಲ್ಲಿ ಅವರು, ಉತ್ತರ ಪ್ರದೇಶ ಸೇರಿದಂತೆ ಶೀಘ್ರದಲ್ಲಿಯೇ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ವಿಶೇಷವಾಗಿ ಉಲ್ಲೇಖಿಸಿದರು.</p>.<p class="title">ಸಾಧನೆಗಳ ಉಲ್ಲೇಖದ ಹಿಂದೆಯೇ ಈ ಎಲ್ಲ ಸಾಧನೆಗಳ ಶ್ರೇಯ ಒಂದು ಸಂಸ್ಥೆ, ವ್ಯವಸ್ಥೆಯದಲ್ಲ; ಬದಲಿಗೆ ಇವು ಸಮಷ್ಟಿ ಸಾಧನೆ. ಇದರಲ್ಲಿ ದೇಶದ ಎಲ್ಲ ನಾಗರಿಕರು ಭಾಗಿಯಾಗಿದ್ದಾರೆ ಎಂದರು. ಭವ್ಯ, ಆಧುನಿಕ ಮತ್ತು ಅಭಿವೃದ್ಧಿ ಭಾರತವನ್ನು 2047ರ ವೇಳೆಗೆ ನಿರ್ಮಿಸಲು ಎಲ್ಲರೂ ಶಕ್ತಿಮೀರಿ ಶ್ರಮಿಸಬೇಕು ಎಂದು ಕರೆ ನೀಡಿದರು.</p>.<p class="title">ಇದರಲ್ಲಿ ನಮ್ಮೆಲ್ಲರ ಪಾಲೂ ಇದೆ. ಈ ಪ್ರಯಾಣದಲ್ಲಿ ನಮ್ಮಗಳದು ಸಮಾನ ಪಾಲು ಎಂದರು. ಸಂಸದರನ್ನು ಉದ್ದೇಶಿಸಿ ನೀವುಗಳು ದೇಶದ ಕೋಟ್ಯಂತರ ಜನರ ಭರವಸೆಗಳ ಚುಕ್ಕಾಣಿ. ಭವಿಷ್ಯದಲ್ಲಿಯೂ ಉತ್ಸಾಹದಿಂದ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.</p>.<p class="title">ಗೋವಾ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ, ಆಫ್ಗಾನಿಸ್ತಾನದಿಂದ ಗುರುಗ್ರಂಥ ಸಾಹೀಬ್ ಅವರ ಎರಡು ವಿಶೇಷ ವಸ್ತುಗಳನ್ನು ಮರಳಿ ತಂದುದು, ಕೃಷಿಕರ ಸಬಲೀಕರಣಕ್ಕೆ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ರಾಷ್ಟ್ರಪತಿ ಕೋವಿಂದ್ ಅವರು ವಿಶೇಷವಾಗಿ ಉಲ್ಲೇಖಿಸಿದರು.</p>.<p>ರಕ್ಷಣಾ ಇಲಾಖೆಯಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳನ್ನು ಪಟ್ಟಿ ಮಾಡಿದ ಅವರು, ರಕ್ಷಣಾ ಪರಿಕರಗಳ ಆಧುನೀಕರಣಕ್ಕೆ ನೀಡಲಾದ ಶೇ 87ರಷ್ಟು ಅನುಮೋದನೆಗಳು ಸ್ವಾವಲಂಬನೆಗೆ ಒತ್ತು ನೀಡಿವೆ. ಮೇಕ್ ಇನ್ ಇಂಡಿಯಾ ವರ್ಗದ್ದಾಗಿದೆ ಎಂದು ಹೇಳಿದರು.</p>.<p>ಕೋವಿಡ್ ಪರಿಸ್ಥಿತಿ ನಿರ್ವಹಣೆಯನ್ನು ಉಲ್ಲೇಖಿಸಿ ಆರೋಗ್ಯ ಕಾರ್ಯಕರ್ತರು, ವಿಜ್ಞಾನಿಗು, ಉದ್ಯಮಿಗಳ ಸೇವೆ ಶ್ಲಾಘನೀಯ. ಇದರ ಪರಿಣಾಮ ಒಂದೇ ವರ್ಷದಲ್ಲಿ 150 ಕೋಟಿ ಡೋಸ್ ಲಸಿಕೆ ನೀಡಲಾಯಿತು ಎಂದರು.</p>.<p>ಕೋವಿಡ್ ಅವಧಿಯಲ್ಲಿ ಯಾರೂ ಹಸಿವಿನಿಂದ ಬಳಲದಂತೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ, 19 ತಿಂಗಳು 80 ಕೋಟಿ ಫಲಾನುಭವಿಗಳಿಗೆ ಪಡಿತರ ವಿತರಿಸಲಾಗಿದೆ ಎಂದು ಹೇಳಿದರು.</p>.<p><strong>ರಾಷ್ಟ್ರಪತಿಗಳು ಹೇಳಿದ್ದು..</strong></p>.<p>* ಮೂಲಸೌಕರ್ಯ ಅಭಿವೃದ್ಧಿಗೆ ವಿವಿಧ ಸಚಿವಾಲಯಗಳ ನಡುವೆ ಹೊಂದಾಣಿಕೆಗೆ ಪ್ರಧಾನಮಂತ್ರಿ ಗತಿಶಕ್ತಿ ರಾಷ್ಟ್ರೀಯ ಕ್ರಿಯಾಯೋಜನೆ ರೂಪಿಸಲಾಗಿದೆ.</p>.<p>* ಭವಿಷ್ಯದಲ್ಲಿ ರೈಲ್ವೆ, ಹೆದ್ದಾರಿ, ವಿಮಾನಯಾನ ಸೇವೆಯು ಪ್ರತ್ಯೇಕ ಸೌಲಭ್ಯವಾಗಿರದೆ, ದೇಶದ ಆಂತರಿಕ ಸಂಪನ್ಮೂಲದ ಭಾಗವೇ ಆಗಿರಲಿದೆ.</p>.<p>* ದೆಹಲಿ–ಮುಂಬೈ ಎಕ್ಸ್ಪ್ರೆಸ್ವೇ ಕಾಮಗಾರಿ ಶೀಘ್ರ ಮುಕ್ತಾಯ. 21 ನೂತನ ವಿಮಾನನಿಲ್ದಾಣಗಳ ಅಭಿವೃದ್ಧಿಗೆ ಕ್ರಮ, 8 ರಾಜ್ಯಗಳಲ್ಲಿ 11 ಹೊಸ ಮೆಟ್ರೊ ರೈಲು ಸೇವೆಗೆ ಒಪ್ಪಿಗೆ, 7 ವರ್ಷದಲ್ಲಿ 24 ಸಾವಿರ ಕಿ.ಮೀ.ರೈಲ್ವೆ ಮಾರ್ಗದ ವಿದ್ಯುದೀಕರಣ.</p>.<p>* ರೈತರಿಗೆ ಉತ್ತಮ ಮಾರುಕಟ್ಟೆ ಒದಗಿಸಲು ಕಿಸಾನ್ ರೈಲ್ ಸೇವೆಗೆ ಚಾಲನೆ, ದೇಶದ ವಿವಿಧ ಭಾಗಗಳಿಗೆ ರೈಲ್ವೆ ಸಂಪರ್ಕ ಕಲ್ಪಿಸಿರುವುದು ಈ ಕ್ಷೇತ್ರದ ಪ್ರಮುಖ ಸಾಧನೆ.</p>.<p>* ಹಿಂದೆ ‘ನಿರ್ಲಕ್ಷ್ಯ‘ಕ್ಕೆ ಒಳಗಾಗಿದ್ದ ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಗೆ ಒತ್ತು. ಪರಿಣಾಮ, ಅಲ್ಲಿ ಶಿಕ್ಷಣ, ಆರೋಗ್ಯ, ಉದ್ಯೋಗ ಕ್ಷೇತ್ರದಲ್ಲಿ ಅವಕಾಶಗಳು ಹೆಚ್ಚುತ್ತಿವೆ.</p>.<p>* ತಾಪಮಾನ ಬದಲಾವಣೆ ಕುರಿತು ಭಾರತ ಈಗ ಜಾಗತಿಕವಾಗಿ ಪ್ರಬಲ ಧ್ವನಿಯಾಗಿದೆ. ತಾಪಮಾನ ಬದಲಾವಣೆ ಒಂದು ಸವಾಲು. ದೇಶದಲ್ಲಿ 2030ರ ವೇಳೆಗೆ ಕಾರ್ಬನ್ ಹೊರಸೂಸುವಿಕೆಯನ್ನು 1 ಬಿಲಿಯನ್ ಟನ್ನಷ್ಟು ತಗ್ಗಿಸುವ ಗುರಿಯನ್ನು ಸರ್ಕಾರ ಹೊಂದಿದೆ.</p>.<p>* ’ಬೇಟಿ ಬಚಾವೋ, ಬೇಟಿ ಪಢಾವೋ‘ ಕಾರ್ಯಕ್ರಮ ಉತ್ತಮ ಫಲ ನೀಡಿದೆ. ಶಾಲೆಗಳಲ್ಲಿ ಬಾಲಕಿಯರ ಹಾಜರಾತಿ ಪ್ರಮಾಣವೂ ಗಣನೀಯವಾಗಿ ಏರಿಕೆಯಾಗಿದೆ.</p>.<p><strong>ಕೇಂದ್ರ ಸಚಿವರ ವಿರುದ್ಧ ಹಕ್ಕುಚ್ಯುತಿ; ನಿಲುವಳಿ ಮಂಡಿಸಲು ನೋಟಿಸ್</strong></p>.<p><strong>ನವದೆಹಲಿ:</strong> ಪೆಗಾಸಸ್ ಕುತಂತ್ರಾಂಶ ಪ್ರಕರಣ ಸಂಬಂಧ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಕಳೆದ ವರ್ಷ ಸಂಸತ್ತಿನಲ್ಲಿ ನೀಡಿದ್ದ ಹೇಳಿಕೆಗೆ ಸಂಬಂಧಿಸಿ ಅವರ ವಿರುದ್ಧ ಹಕ್ಕುಚ್ಯುತಿ ನಿಲುವಳಿ ಮಂಡಿಸಲು ಸಿಪಿಐ ಸಂಸದ ಬಿನೋಯ್ ವಿಶ್ವಂ ಅವರು ನೋಟಿಸ್ ನೀಡಿದ್ದಾರೆ.</p>.<p>ಪೆಗಾಸಸ್ ಕುರಿತಂತೆ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯಲ್ಲಿ ಪ್ರಕಟವಾದ ವರದಿ ಹಿನ್ನೆಲೆಯಲ್ಲಿ ಬಿನೋಯ್ ವಿಶ್ವಂ ಈಗ ನೋಟಿಸ್ ನೀಡಿದ್ದಾರೆ. ಈ ವರದಿ ಪ್ರಕಾರ, ಕುತಂತ್ರಾಂಶವು ಇಸ್ರೇಲ್ ಜೊತೆಗೆ 2017ರಲ್ಲಿ ನಡೆದಿದ್ದ ರಕ್ಷಣಾ ಪರಿಕರ ವಹಿವಾಟಿನ ಭಾಗವೇ ಆಗಿತ್ತು.</p>.<p>ಕಳೆದ ವರ್ಷ ಜುಲೈನಲ್ಲಿ ಮುಂಗಾರು ಅಧಿವೇಶನದಲ್ಲಿ ವೈಷ್ಣವ್ ಅವರು, ‘ಪೆಗಾಸಸ್ ಕುರಿತು ಅಧಿವೇಶನ ಸಂದರ್ಭದಲ್ಲಿಯೇ ಲೇಖನ ಪ್ರಕಟವಾಗಿರುವುದು ಕಾಕತಾಳೀಯ ಅಲ್ಲ. ಇದನ್ನು ಪ್ರಮುಖವಾಗಿ ಪರಿಗಣಿಸಲು ಆಧಾರಗಳಿಲ್ಲ’ ಎಂದಿದ್ದರು.</p>.<p>ರಾಜ್ಯಸಭೆ ಸದಸ್ಯರಾದ ವಿಶ್ವಂ ಅವರು, ‘ಸತ್ಯವನ್ನು ಅಡಗಿಸಲು ಸರ್ಕಾರದ ಪುನರಾವರ್ತಿತ ಯತ್ನಗಳ ನಡುವೆಯೂ, ಪೆಗಾಸಸ್ ಕುತಂತ್ರಾಂಶ ಖರೀದಿ ಕುರಿತಂತೆ ವಿವಿಧ ಸತ್ಯಗಳು ಹೊರಬೀಳುತ್ತಿವೆ. ನ್ಯೂಯಾರ್ಕ್ ಟೈಮ್ಸ್ ವರದಿ ಈ ಪಟ್ಟಿಗೆ ಹೊಸ ಸೇರ್ಪಡೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ದಾಖಲೆಯ ಪ್ರಮಾಣದಲ್ಲಿ ಕೃಷಿ ಉತ್ಪನ್ನಗಳ ಖರೀದಿ, ದೇಶದ ಆಂತರಿಕ ಭದ್ರತೆಗೆ ಕ್ರಮ, ಕೋವಿಡ್ನ ಪರಿಣಾಮಕಾರಿ ನಿರ್ವಹಣೆ ಸೇರಿ ಹಲವು ‘ಸಾಧನೆ’ಗಳನ್ನು ಪಟ್ಟಿಮಾಡಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್, ಅಭಿವೃದ್ಧಿ ಗುರಿ ಸಾಧನೆ ಹಾದಿಯಲ್ಲಿ ಈ ಎಲ್ಲವು ‘ಸಮಷ್ಟಿ ಸಾಧನೆಗಳು’ ಎಂದೂ ಶ್ಲಾಘಿಸಿದರು.</p>.<p class="title">ಸೋಮವಾರ ಬಜೆಟ್ ಅಧಿವೇಶನಕ್ಕೆ ಚಾಲನೆ ನೀಡಿ, ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾಡಿದ 50 ನಿಮಿಷದ ಭಾಷಣದಲ್ಲಿ ಅವರು, ಉತ್ತರ ಪ್ರದೇಶ ಸೇರಿದಂತೆ ಶೀಘ್ರದಲ್ಲಿಯೇ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ವಿಶೇಷವಾಗಿ ಉಲ್ಲೇಖಿಸಿದರು.</p>.<p class="title">ಸಾಧನೆಗಳ ಉಲ್ಲೇಖದ ಹಿಂದೆಯೇ ಈ ಎಲ್ಲ ಸಾಧನೆಗಳ ಶ್ರೇಯ ಒಂದು ಸಂಸ್ಥೆ, ವ್ಯವಸ್ಥೆಯದಲ್ಲ; ಬದಲಿಗೆ ಇವು ಸಮಷ್ಟಿ ಸಾಧನೆ. ಇದರಲ್ಲಿ ದೇಶದ ಎಲ್ಲ ನಾಗರಿಕರು ಭಾಗಿಯಾಗಿದ್ದಾರೆ ಎಂದರು. ಭವ್ಯ, ಆಧುನಿಕ ಮತ್ತು ಅಭಿವೃದ್ಧಿ ಭಾರತವನ್ನು 2047ರ ವೇಳೆಗೆ ನಿರ್ಮಿಸಲು ಎಲ್ಲರೂ ಶಕ್ತಿಮೀರಿ ಶ್ರಮಿಸಬೇಕು ಎಂದು ಕರೆ ನೀಡಿದರು.</p>.<p class="title">ಇದರಲ್ಲಿ ನಮ್ಮೆಲ್ಲರ ಪಾಲೂ ಇದೆ. ಈ ಪ್ರಯಾಣದಲ್ಲಿ ನಮ್ಮಗಳದು ಸಮಾನ ಪಾಲು ಎಂದರು. ಸಂಸದರನ್ನು ಉದ್ದೇಶಿಸಿ ನೀವುಗಳು ದೇಶದ ಕೋಟ್ಯಂತರ ಜನರ ಭರವಸೆಗಳ ಚುಕ್ಕಾಣಿ. ಭವಿಷ್ಯದಲ್ಲಿಯೂ ಉತ್ಸಾಹದಿಂದ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.</p>.<p class="title">ಗೋವಾ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ, ಆಫ್ಗಾನಿಸ್ತಾನದಿಂದ ಗುರುಗ್ರಂಥ ಸಾಹೀಬ್ ಅವರ ಎರಡು ವಿಶೇಷ ವಸ್ತುಗಳನ್ನು ಮರಳಿ ತಂದುದು, ಕೃಷಿಕರ ಸಬಲೀಕರಣಕ್ಕೆ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ರಾಷ್ಟ್ರಪತಿ ಕೋವಿಂದ್ ಅವರು ವಿಶೇಷವಾಗಿ ಉಲ್ಲೇಖಿಸಿದರು.</p>.<p>ರಕ್ಷಣಾ ಇಲಾಖೆಯಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳನ್ನು ಪಟ್ಟಿ ಮಾಡಿದ ಅವರು, ರಕ್ಷಣಾ ಪರಿಕರಗಳ ಆಧುನೀಕರಣಕ್ಕೆ ನೀಡಲಾದ ಶೇ 87ರಷ್ಟು ಅನುಮೋದನೆಗಳು ಸ್ವಾವಲಂಬನೆಗೆ ಒತ್ತು ನೀಡಿವೆ. ಮೇಕ್ ಇನ್ ಇಂಡಿಯಾ ವರ್ಗದ್ದಾಗಿದೆ ಎಂದು ಹೇಳಿದರು.</p>.<p>ಕೋವಿಡ್ ಪರಿಸ್ಥಿತಿ ನಿರ್ವಹಣೆಯನ್ನು ಉಲ್ಲೇಖಿಸಿ ಆರೋಗ್ಯ ಕಾರ್ಯಕರ್ತರು, ವಿಜ್ಞಾನಿಗು, ಉದ್ಯಮಿಗಳ ಸೇವೆ ಶ್ಲಾಘನೀಯ. ಇದರ ಪರಿಣಾಮ ಒಂದೇ ವರ್ಷದಲ್ಲಿ 150 ಕೋಟಿ ಡೋಸ್ ಲಸಿಕೆ ನೀಡಲಾಯಿತು ಎಂದರು.</p>.<p>ಕೋವಿಡ್ ಅವಧಿಯಲ್ಲಿ ಯಾರೂ ಹಸಿವಿನಿಂದ ಬಳಲದಂತೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ, 19 ತಿಂಗಳು 80 ಕೋಟಿ ಫಲಾನುಭವಿಗಳಿಗೆ ಪಡಿತರ ವಿತರಿಸಲಾಗಿದೆ ಎಂದು ಹೇಳಿದರು.</p>.<p><strong>ರಾಷ್ಟ್ರಪತಿಗಳು ಹೇಳಿದ್ದು..</strong></p>.<p>* ಮೂಲಸೌಕರ್ಯ ಅಭಿವೃದ್ಧಿಗೆ ವಿವಿಧ ಸಚಿವಾಲಯಗಳ ನಡುವೆ ಹೊಂದಾಣಿಕೆಗೆ ಪ್ರಧಾನಮಂತ್ರಿ ಗತಿಶಕ್ತಿ ರಾಷ್ಟ್ರೀಯ ಕ್ರಿಯಾಯೋಜನೆ ರೂಪಿಸಲಾಗಿದೆ.</p>.<p>* ಭವಿಷ್ಯದಲ್ಲಿ ರೈಲ್ವೆ, ಹೆದ್ದಾರಿ, ವಿಮಾನಯಾನ ಸೇವೆಯು ಪ್ರತ್ಯೇಕ ಸೌಲಭ್ಯವಾಗಿರದೆ, ದೇಶದ ಆಂತರಿಕ ಸಂಪನ್ಮೂಲದ ಭಾಗವೇ ಆಗಿರಲಿದೆ.</p>.<p>* ದೆಹಲಿ–ಮುಂಬೈ ಎಕ್ಸ್ಪ್ರೆಸ್ವೇ ಕಾಮಗಾರಿ ಶೀಘ್ರ ಮುಕ್ತಾಯ. 21 ನೂತನ ವಿಮಾನನಿಲ್ದಾಣಗಳ ಅಭಿವೃದ್ಧಿಗೆ ಕ್ರಮ, 8 ರಾಜ್ಯಗಳಲ್ಲಿ 11 ಹೊಸ ಮೆಟ್ರೊ ರೈಲು ಸೇವೆಗೆ ಒಪ್ಪಿಗೆ, 7 ವರ್ಷದಲ್ಲಿ 24 ಸಾವಿರ ಕಿ.ಮೀ.ರೈಲ್ವೆ ಮಾರ್ಗದ ವಿದ್ಯುದೀಕರಣ.</p>.<p>* ರೈತರಿಗೆ ಉತ್ತಮ ಮಾರುಕಟ್ಟೆ ಒದಗಿಸಲು ಕಿಸಾನ್ ರೈಲ್ ಸೇವೆಗೆ ಚಾಲನೆ, ದೇಶದ ವಿವಿಧ ಭಾಗಗಳಿಗೆ ರೈಲ್ವೆ ಸಂಪರ್ಕ ಕಲ್ಪಿಸಿರುವುದು ಈ ಕ್ಷೇತ್ರದ ಪ್ರಮುಖ ಸಾಧನೆ.</p>.<p>* ಹಿಂದೆ ‘ನಿರ್ಲಕ್ಷ್ಯ‘ಕ್ಕೆ ಒಳಗಾಗಿದ್ದ ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಗೆ ಒತ್ತು. ಪರಿಣಾಮ, ಅಲ್ಲಿ ಶಿಕ್ಷಣ, ಆರೋಗ್ಯ, ಉದ್ಯೋಗ ಕ್ಷೇತ್ರದಲ್ಲಿ ಅವಕಾಶಗಳು ಹೆಚ್ಚುತ್ತಿವೆ.</p>.<p>* ತಾಪಮಾನ ಬದಲಾವಣೆ ಕುರಿತು ಭಾರತ ಈಗ ಜಾಗತಿಕವಾಗಿ ಪ್ರಬಲ ಧ್ವನಿಯಾಗಿದೆ. ತಾಪಮಾನ ಬದಲಾವಣೆ ಒಂದು ಸವಾಲು. ದೇಶದಲ್ಲಿ 2030ರ ವೇಳೆಗೆ ಕಾರ್ಬನ್ ಹೊರಸೂಸುವಿಕೆಯನ್ನು 1 ಬಿಲಿಯನ್ ಟನ್ನಷ್ಟು ತಗ್ಗಿಸುವ ಗುರಿಯನ್ನು ಸರ್ಕಾರ ಹೊಂದಿದೆ.</p>.<p>* ’ಬೇಟಿ ಬಚಾವೋ, ಬೇಟಿ ಪಢಾವೋ‘ ಕಾರ್ಯಕ್ರಮ ಉತ್ತಮ ಫಲ ನೀಡಿದೆ. ಶಾಲೆಗಳಲ್ಲಿ ಬಾಲಕಿಯರ ಹಾಜರಾತಿ ಪ್ರಮಾಣವೂ ಗಣನೀಯವಾಗಿ ಏರಿಕೆಯಾಗಿದೆ.</p>.<p><strong>ಕೇಂದ್ರ ಸಚಿವರ ವಿರುದ್ಧ ಹಕ್ಕುಚ್ಯುತಿ; ನಿಲುವಳಿ ಮಂಡಿಸಲು ನೋಟಿಸ್</strong></p>.<p><strong>ನವದೆಹಲಿ:</strong> ಪೆಗಾಸಸ್ ಕುತಂತ್ರಾಂಶ ಪ್ರಕರಣ ಸಂಬಂಧ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಕಳೆದ ವರ್ಷ ಸಂಸತ್ತಿನಲ್ಲಿ ನೀಡಿದ್ದ ಹೇಳಿಕೆಗೆ ಸಂಬಂಧಿಸಿ ಅವರ ವಿರುದ್ಧ ಹಕ್ಕುಚ್ಯುತಿ ನಿಲುವಳಿ ಮಂಡಿಸಲು ಸಿಪಿಐ ಸಂಸದ ಬಿನೋಯ್ ವಿಶ್ವಂ ಅವರು ನೋಟಿಸ್ ನೀಡಿದ್ದಾರೆ.</p>.<p>ಪೆಗಾಸಸ್ ಕುರಿತಂತೆ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯಲ್ಲಿ ಪ್ರಕಟವಾದ ವರದಿ ಹಿನ್ನೆಲೆಯಲ್ಲಿ ಬಿನೋಯ್ ವಿಶ್ವಂ ಈಗ ನೋಟಿಸ್ ನೀಡಿದ್ದಾರೆ. ಈ ವರದಿ ಪ್ರಕಾರ, ಕುತಂತ್ರಾಂಶವು ಇಸ್ರೇಲ್ ಜೊತೆಗೆ 2017ರಲ್ಲಿ ನಡೆದಿದ್ದ ರಕ್ಷಣಾ ಪರಿಕರ ವಹಿವಾಟಿನ ಭಾಗವೇ ಆಗಿತ್ತು.</p>.<p>ಕಳೆದ ವರ್ಷ ಜುಲೈನಲ್ಲಿ ಮುಂಗಾರು ಅಧಿವೇಶನದಲ್ಲಿ ವೈಷ್ಣವ್ ಅವರು, ‘ಪೆಗಾಸಸ್ ಕುರಿತು ಅಧಿವೇಶನ ಸಂದರ್ಭದಲ್ಲಿಯೇ ಲೇಖನ ಪ್ರಕಟವಾಗಿರುವುದು ಕಾಕತಾಳೀಯ ಅಲ್ಲ. ಇದನ್ನು ಪ್ರಮುಖವಾಗಿ ಪರಿಗಣಿಸಲು ಆಧಾರಗಳಿಲ್ಲ’ ಎಂದಿದ್ದರು.</p>.<p>ರಾಜ್ಯಸಭೆ ಸದಸ್ಯರಾದ ವಿಶ್ವಂ ಅವರು, ‘ಸತ್ಯವನ್ನು ಅಡಗಿಸಲು ಸರ್ಕಾರದ ಪುನರಾವರ್ತಿತ ಯತ್ನಗಳ ನಡುವೆಯೂ, ಪೆಗಾಸಸ್ ಕುತಂತ್ರಾಂಶ ಖರೀದಿ ಕುರಿತಂತೆ ವಿವಿಧ ಸತ್ಯಗಳು ಹೊರಬೀಳುತ್ತಿವೆ. ನ್ಯೂಯಾರ್ಕ್ ಟೈಮ್ಸ್ ವರದಿ ಈ ಪಟ್ಟಿಗೆ ಹೊಸ ಸೇರ್ಪಡೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>