<p><strong>ನವದೆಹಲಿ:</strong>ಈ ಬಾರಿ ರಾಷ್ಟ್ರಪತಿ ಚುನಾವಣೆಗೆ ತನ್ನ ಅಭ್ಯರ್ಥಿಯನ್ನಾಗಿ ಬುಡಕಟ್ಟು ಸಮುದಾಯದ ಮಹಿಳೆ <a href="https://www.prajavani.net/women/profile-of-draupadi-murmu-amrita-madhukalya-voice-of-tribal-rights-947818.html" target="_blank">ದ್ರೌಪದಿ ಮುರ್ಮು</a> ಅವರನ್ನು ಕಣಕ್ಕಿಳಿಸಿರುವ ಬಿಜೆಪಿಗೆ, ಆ ಸಮುದಾಯದ ಕಲ್ಯಾಣದ ಬಗ್ಗೆ ಬದ್ಧತೆಯೇ ಇಲ್ಲ ಎಂದುಯಶವಂತ ಸಿನ್ಹಾ ಆರೋಪಿಸಿದ್ದಾರೆ.</p>.<p>ರಾಷ್ಟ್ರಪತಿ ಚುನಾವಣೆಗೆ ಎನ್ಡಿಎಯೇತರ ಪಕ್ಷಗಳ ಅಭ್ಯರ್ಥಿಯಾಗಿರುವ ಸಿನ್ಹಾ,ಮಧ್ಯಪ್ರದೇಶದಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಬುಡಕಟ್ಟು ಮಹಿಳೆಯೊಬ್ಬರಿಗೆ ಬೆಂಕಿ ಹಚ್ಚಿರುವ ಪ್ರಕರಣದ ವಿಚಾರವಾಗಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.</p>.<p>'ದಶಕಗಳಿಂದಲೂ ಬಿಜೆಪಿ ಅಧಿಕಾರದಲ್ಲಿರುವ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಬುಡಕಟ್ಟು ಮಹಿಳೆಗೆ ಬೆಂಕಿ ಹಚ್ಚಿರುವುದನ್ನು ಬಲವಾಗಿ ಖಂಡಿಸುತ್ತೇನೆ. ಈ ಪ್ರಕರಣವುಬುಡಕಟ್ಟು ಸಮುದಾಯದ ಕಲ್ಯಾಣದ ವಿಚಾರದಲ್ಲಿಬಿಜೆಪಿ ಬದ್ಧತೆ ಹೊಂದಿಲ್ಲ ಎಂಬುದನ್ನು ತೋರಿಸುತ್ತದೆ' ಎಂದು ಟ್ವೀಟ್ ಮಾಡಿದ್ದಾರೆ.</p>.<p>ಮಧ್ಯಪ್ರದೇಶದ ಗುನಾ ಜಿಲ್ಲೆಯ ಧನೋರಿಯಾ ಗ್ರಾಮದ ಮಹಿಳೆ ರಾಮ್ಪ್ಯಾರಿ ಬಾಯಿ (45) ಅವರಿಗೆ ಹೊಲಕ್ಕೆ ಹೋಗಿದ್ದ ವೇಳೆ ಬೆಂಕಿ ಹಚ್ಚಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ. ಪ್ರಕರಣ ಸಂಬಂಧ ಇಬ್ಬರು ಮಹಿಳೆಯರೂ ಸೇರಿದಂತೆ ಒಟ್ಟು ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ರಾಷ್ಟ್ರೀಯ ಮಹಿಳಾ ಆಯೋಗವು ಈ ಪ್ರಕರಣವನ್ನುಘೋರ ಮತ್ತು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಎಲ್ಲಾ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.</p>.<p><strong>ಮಧ್ಯಪ್ರದೇಶದಲ್ಲೇ ಮತ್ತೊಂದು ಪ್ರಕರಣ</strong><br />ವಿವಾಹೇತರ ಸಂಬಂಧ ಹೊಂದಿರುವುದಾಗಿ ಆರೋಪಿಸಿ ಬುಡಕಟ್ಟು ಮಹಿಳೆಯೊಬ್ಬರಿಗೆ ಥಳಿಸಿರುವ ಪ್ರಕರಣದೆವಾಸ್ ಜಿಲ್ಲೆಯಬೋರ್ಪದವ್ ಗ್ರಾಮದಲ್ಲಿ ಭಾನುವಾರ ನಡೆದಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/mp-tribal-woman-thrashed-by-villagers-over-suspected-affair-paraded-after-being-made-to-carry-951306.html" itemprop="url" target="_blank">ಮಧ್ಯಪ್ರದೇಶ: ಬುಡಕಟ್ಟು ಮಹಿಳೆಗೆ ಚಪ್ಪಲಿ ಹಾರ ಹಾಕಿ, ಗಂಡನ ಹೊತ್ತು ಸಾಗುವ ಶಿಕ್ಷೆ</a></p>.<p>ಮಹಿಳೆ ಬೇರೊಬ್ಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಶಂಕಿಸಿ ಆಕೆಯ ಪತಿಯೇ ಗ್ರಾಮಸ್ಥರ ಎದುರುಥಳಿಸಿದ್ದಾನೆ. ನಂತರ ಗ್ರಾಮಸ್ಥರು, ಚಪ್ಪಲಿಯ ಹಾರ ಹಾಕಿಸಿ, ಗಂಡನನ್ನು ಹೆಗಲ ಮೇಲೆ ಹೊತ್ತು ಸಾಗುವಂತೆ ಮಹಿಳೆಗೆ ಕಿರುಕುಳ ನೀಡಿದ್ದಾರೆ.</p>.<p>ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪತಿಯೂ ಸೇರಿದಂತೆ ಒಟ್ಟು 9 ಜನರನ್ನು ಬಂಧಿಸಲಾಗಿದೆ ಎಂದುಪೊಲೀಸರು ತಿಳಿಸಿದ್ದಾರೆ. ವಿಚಾರಣೆ ವೇಳೆ ಮಹಿಳೆಯು, ತಮಗೆ 15 ವರ್ಷವಿದ್ದಾಗಲೇ ಮದುವೆ ಮಾಡಲಾಯಿತು. ಪತಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದುದರಿಂದ ಮನೆಬಿಟ್ಟು ಹೋದೆ ಎಂದು ಹೇಳಿಕೊಂಡಿದ್ದಾರೆ.</p>.<p><strong>ಇವನ್ನೂ ಓದಿ<br />*</strong><a href="https://www.prajavani.net/india-news/presidential-polls-its-draupadi-murmu-vs-yashwant-sinha-947770.html" itemprop="url" target="_blank">ರಾಷ್ಟ್ರಪತಿ ಹುದ್ದೆಗೆ ಸಿನ್ಹಾ–ಮುರ್ಮು ಪೈಪೋಟಿ</a><br /><strong>*</strong><a href="https://www.prajavani.net/women/profile-of-draupadi-murmu-amrita-madhukalya-voice-of-tribal-rights-947818.html" itemprop="url" target="_blank">ಬುಡಕಟ್ಟು ಸಮುದಾಯದ ಗಟ್ಟಿ ಧ್ವನಿ ದ್ರೌಪದಿ ಮುರ್ಮು</a><br /><strong>*</strong><a href="https://www.prajavani.net/india-news/have-done-much-more-for-tribals-than-murmu-proud-of-my-record-as-vajpayees-bjp-yashwant-sinha-948277.html" itemprop="url" target="_blank">ಬುಡಕಟ್ಟು ಜನರಿಗೆ ದ್ರೌಪದಿ ಕೊಡುಗೆ ಏನು: ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಸಿನ್ಹಾ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಈ ಬಾರಿ ರಾಷ್ಟ್ರಪತಿ ಚುನಾವಣೆಗೆ ತನ್ನ ಅಭ್ಯರ್ಥಿಯನ್ನಾಗಿ ಬುಡಕಟ್ಟು ಸಮುದಾಯದ ಮಹಿಳೆ <a href="https://www.prajavani.net/women/profile-of-draupadi-murmu-amrita-madhukalya-voice-of-tribal-rights-947818.html" target="_blank">ದ್ರೌಪದಿ ಮುರ್ಮು</a> ಅವರನ್ನು ಕಣಕ್ಕಿಳಿಸಿರುವ ಬಿಜೆಪಿಗೆ, ಆ ಸಮುದಾಯದ ಕಲ್ಯಾಣದ ಬಗ್ಗೆ ಬದ್ಧತೆಯೇ ಇಲ್ಲ ಎಂದುಯಶವಂತ ಸಿನ್ಹಾ ಆರೋಪಿಸಿದ್ದಾರೆ.</p>.<p>ರಾಷ್ಟ್ರಪತಿ ಚುನಾವಣೆಗೆ ಎನ್ಡಿಎಯೇತರ ಪಕ್ಷಗಳ ಅಭ್ಯರ್ಥಿಯಾಗಿರುವ ಸಿನ್ಹಾ,ಮಧ್ಯಪ್ರದೇಶದಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಬುಡಕಟ್ಟು ಮಹಿಳೆಯೊಬ್ಬರಿಗೆ ಬೆಂಕಿ ಹಚ್ಚಿರುವ ಪ್ರಕರಣದ ವಿಚಾರವಾಗಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.</p>.<p>'ದಶಕಗಳಿಂದಲೂ ಬಿಜೆಪಿ ಅಧಿಕಾರದಲ್ಲಿರುವ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಬುಡಕಟ್ಟು ಮಹಿಳೆಗೆ ಬೆಂಕಿ ಹಚ್ಚಿರುವುದನ್ನು ಬಲವಾಗಿ ಖಂಡಿಸುತ್ತೇನೆ. ಈ ಪ್ರಕರಣವುಬುಡಕಟ್ಟು ಸಮುದಾಯದ ಕಲ್ಯಾಣದ ವಿಚಾರದಲ್ಲಿಬಿಜೆಪಿ ಬದ್ಧತೆ ಹೊಂದಿಲ್ಲ ಎಂಬುದನ್ನು ತೋರಿಸುತ್ತದೆ' ಎಂದು ಟ್ವೀಟ್ ಮಾಡಿದ್ದಾರೆ.</p>.<p>ಮಧ್ಯಪ್ರದೇಶದ ಗುನಾ ಜಿಲ್ಲೆಯ ಧನೋರಿಯಾ ಗ್ರಾಮದ ಮಹಿಳೆ ರಾಮ್ಪ್ಯಾರಿ ಬಾಯಿ (45) ಅವರಿಗೆ ಹೊಲಕ್ಕೆ ಹೋಗಿದ್ದ ವೇಳೆ ಬೆಂಕಿ ಹಚ್ಚಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ. ಪ್ರಕರಣ ಸಂಬಂಧ ಇಬ್ಬರು ಮಹಿಳೆಯರೂ ಸೇರಿದಂತೆ ಒಟ್ಟು ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ರಾಷ್ಟ್ರೀಯ ಮಹಿಳಾ ಆಯೋಗವು ಈ ಪ್ರಕರಣವನ್ನುಘೋರ ಮತ್ತು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಎಲ್ಲಾ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.</p>.<p><strong>ಮಧ್ಯಪ್ರದೇಶದಲ್ಲೇ ಮತ್ತೊಂದು ಪ್ರಕರಣ</strong><br />ವಿವಾಹೇತರ ಸಂಬಂಧ ಹೊಂದಿರುವುದಾಗಿ ಆರೋಪಿಸಿ ಬುಡಕಟ್ಟು ಮಹಿಳೆಯೊಬ್ಬರಿಗೆ ಥಳಿಸಿರುವ ಪ್ರಕರಣದೆವಾಸ್ ಜಿಲ್ಲೆಯಬೋರ್ಪದವ್ ಗ್ರಾಮದಲ್ಲಿ ಭಾನುವಾರ ನಡೆದಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/mp-tribal-woman-thrashed-by-villagers-over-suspected-affair-paraded-after-being-made-to-carry-951306.html" itemprop="url" target="_blank">ಮಧ್ಯಪ್ರದೇಶ: ಬುಡಕಟ್ಟು ಮಹಿಳೆಗೆ ಚಪ್ಪಲಿ ಹಾರ ಹಾಕಿ, ಗಂಡನ ಹೊತ್ತು ಸಾಗುವ ಶಿಕ್ಷೆ</a></p>.<p>ಮಹಿಳೆ ಬೇರೊಬ್ಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಶಂಕಿಸಿ ಆಕೆಯ ಪತಿಯೇ ಗ್ರಾಮಸ್ಥರ ಎದುರುಥಳಿಸಿದ್ದಾನೆ. ನಂತರ ಗ್ರಾಮಸ್ಥರು, ಚಪ್ಪಲಿಯ ಹಾರ ಹಾಕಿಸಿ, ಗಂಡನನ್ನು ಹೆಗಲ ಮೇಲೆ ಹೊತ್ತು ಸಾಗುವಂತೆ ಮಹಿಳೆಗೆ ಕಿರುಕುಳ ನೀಡಿದ್ದಾರೆ.</p>.<p>ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪತಿಯೂ ಸೇರಿದಂತೆ ಒಟ್ಟು 9 ಜನರನ್ನು ಬಂಧಿಸಲಾಗಿದೆ ಎಂದುಪೊಲೀಸರು ತಿಳಿಸಿದ್ದಾರೆ. ವಿಚಾರಣೆ ವೇಳೆ ಮಹಿಳೆಯು, ತಮಗೆ 15 ವರ್ಷವಿದ್ದಾಗಲೇ ಮದುವೆ ಮಾಡಲಾಯಿತು. ಪತಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದುದರಿಂದ ಮನೆಬಿಟ್ಟು ಹೋದೆ ಎಂದು ಹೇಳಿಕೊಂಡಿದ್ದಾರೆ.</p>.<p><strong>ಇವನ್ನೂ ಓದಿ<br />*</strong><a href="https://www.prajavani.net/india-news/presidential-polls-its-draupadi-murmu-vs-yashwant-sinha-947770.html" itemprop="url" target="_blank">ರಾಷ್ಟ್ರಪತಿ ಹುದ್ದೆಗೆ ಸಿನ್ಹಾ–ಮುರ್ಮು ಪೈಪೋಟಿ</a><br /><strong>*</strong><a href="https://www.prajavani.net/women/profile-of-draupadi-murmu-amrita-madhukalya-voice-of-tribal-rights-947818.html" itemprop="url" target="_blank">ಬುಡಕಟ್ಟು ಸಮುದಾಯದ ಗಟ್ಟಿ ಧ್ವನಿ ದ್ರೌಪದಿ ಮುರ್ಮು</a><br /><strong>*</strong><a href="https://www.prajavani.net/india-news/have-done-much-more-for-tribals-than-murmu-proud-of-my-record-as-vajpayees-bjp-yashwant-sinha-948277.html" itemprop="url" target="_blank">ಬುಡಕಟ್ಟು ಜನರಿಗೆ ದ್ರೌಪದಿ ಕೊಡುಗೆ ಏನು: ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಸಿನ್ಹಾ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>