ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ, ತಮಿಳುನಾಡು, ಲಕ್ಷದ್ವೀಪಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

Last Updated 16 ಮಾರ್ಚ್ 2023, 4:59 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಿಗೆ ಆರು ದಿನಗಳ ಪ್ರವಾಸದ ಭಾಗವಾಗಿ ಇಂದು (ಗುರುವಾರ) ಕೊಚ್ಚಿಗೆ ಆಗಮಿಸಲಿದ್ದಾರೆ.

ದೇಶದ ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಕೇರಳ ಮತ್ತು ಲಕ್ಷದ್ವೀಪಕ್ಕೆ ಇದು ಅವರ ಮೊದಲ ಭೇಟಿಯಾಗಿದೆ. ಇಂದು ಮಧ್ಯಾಹ್ನ ಕೊಚ್ಚಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅವರು ಆಗಮಿಸುವರು.

ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ನಿರ್ಮಾಣ ಮಾಡಿರುವ ಐಎನ್‌ಎಸ್‌ ವಿಕ್ರಾಂತ್‌ಗೆ ಭೇಟಿ ನೀಡಲಿದ್ದಾರೆ. ನಂತರ ನೌಕೆಯ ಅಧಿಕಾರಿಗಳು ಮತ್ತು ನಾವಿಕರೊಂದಿಗೆ ಸಂವಾದ ನಡೆಸಲಿದ್ದಾರೆ.

ಶುಕ್ರವಾರ ಕೊಲ್ಲಂನಲ್ಲಿರುವ ಮಾತಾ ಅಮೃತಾನಂದಮಯಿ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ತಿರುವನಂತಪುರದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಲಯಾಳಂ ಭಾಷೆಗೆ ಅನುವಾದಿಸಲಾದ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಪುಸ್ತಕಗಳ ಬಿಡುಗಡೆ ಮಾಡಲಿದ್ದಾರೆ.

ಶನಿವಾರ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಸ್ಮಾರಕ ಮತ್ತು ತಿರುವಳ್ಳೂರ್ ಪ್ರತಿಮೆಗೆ ಭೇಟಿ ನೀಡಲಿದ್ದಾರೆ. ನಂತರ ಲಕ್ಷದ್ವೀಪದ ಕವರಟ್ಟಿಯಲ್ಲಿ ಸ್ವ-ಸಹಾಯ ಗುಂಪುಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಮಾರ್ಚ್ 21ರಂದು ಕೊಚ್ಚಿ ಮೂಲಕ ದೆಹಲಿಗೆ ಮರಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT