‘ಕೇಂದ್ರ ಸರ್ಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಸರ್ಕಾರ ಮೌನವಹಿಸಿದೆ. ಹೀಗಾಗಿ, ರೈತರು ಮತ್ತು ನಾಗರಿಕರು ಬಿಜೆಪಿ ಮತ್ತು ಜೆಜೆಪಿ ಶಾಸಕರನ್ನು ಭೇಟಿಯಾಗಿ ಅವಿಶ್ವಾಸ ಪರ ಮತ ಚಲಾಯಿಸುವಂತೆ ಮನವೊಲಿಸುವ ಪ್ರಯತ್ನ ಮಾಡಬೇಕು. ಈ ಮೂಲಕ ಸರ್ಕಾರಕ್ಕೆ ಪಾಠ ಕಲಿಸಬೇಕು’ ಎಂದು ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ಡಾ. ದರ್ಶನ್ ಪಾಲ್ ಕೋರಿದ್ದಾರೆ.