<p><strong>ಬಿಸ್ಲಾಪುರ:</strong> ಕಾಂಗ್ರೆಸ್ ಸರ್ಕಾರ ಸಾಕಷ್ಟು ಯೋಜನೆಗಳ ಶಂಕು ಸ್ಥಾಪನೆ ಮಾಡಿ, ಚುನಾವಣೆ ಬಳಿಕ ಯೋಜನೆ ಪೂರ್ಣಗೊಳಿಸಲು ಮರೆತುಬಿಡುತ್ತಿತ್ತು. ಆದರೆ ತಮ್ಮ ಸರ್ಕಾರ ಶಂಕುಸ್ಥಾಪನೆಯ ಜೊತೆಗೆ ಯೋಜನೆಗಳ ಉದ್ಘಾಟನೆಯನ್ನೂ ನೆರವೇರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.</p>.<p>ಇಲ್ಲಿನ ಲಹ್ನು ಮೈದಾನದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನರು ರಾಜ್ಯ ಹಾಗೂ ಕೇಂದ್ರ ಎರಡರಲ್ಲಿಯೂ ಬಿಜೆಪಿಯನ್ನು ಆಯ್ಕೆ ಮಾಡಿರುವುದರಿಂದ ಈ ಅಭಿವೃದ್ಧಿ ಸಾಧ್ಯವಾಗಿದೆ ಎಂದರು.</p>.<p>ಎಐಐಎಂಎಸ್(ಏಮ್ಸ್) ಮತ್ತು ಹೈಡ್ರೋ ಎಂಜಿನಿಯರಿಂಗ್ ಕಾಲೇಜಿಗೆ ಪ್ರಧಾನಿ ಚಾಲನೆ ನೀಡಿದರು. ದೇಶವನ್ನು ರಕ್ಷಣೆ ಮಾಡುವಲ್ಲಿ ಹಿಮಾಚಲ ಪ್ರದೇಶ ಮಹತ್ವದ ಪಾತ್ರ ವಹಿಸಿದೆ. ಈಗ ಏಮ್ಸ್ ಬಿಸ್ಲಾಪುರದೊಂದಿಗೆ ಜೀವ ರಕ್ಷಣೆಯಲ್ಲಿಯೂ ಪ್ರಮುಖ ಪಾತ್ರ ವಹಿಸಲಿದೆ ಎಂದು ಪ್ರಧಾನಿ ಹೇಳಿದರು.</p>.<p>ಮುಂದಿನ ಎರಡು ತಿಂಗಳೊಳಗೆ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಅದರ ಬೆನ್ನಲ್ಲೇ ಪ್ರಧಾನಿ ಬಹಿರಂಗ ಸಭೆ ಆಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಸ್ಲಾಪುರ:</strong> ಕಾಂಗ್ರೆಸ್ ಸರ್ಕಾರ ಸಾಕಷ್ಟು ಯೋಜನೆಗಳ ಶಂಕು ಸ್ಥಾಪನೆ ಮಾಡಿ, ಚುನಾವಣೆ ಬಳಿಕ ಯೋಜನೆ ಪೂರ್ಣಗೊಳಿಸಲು ಮರೆತುಬಿಡುತ್ತಿತ್ತು. ಆದರೆ ತಮ್ಮ ಸರ್ಕಾರ ಶಂಕುಸ್ಥಾಪನೆಯ ಜೊತೆಗೆ ಯೋಜನೆಗಳ ಉದ್ಘಾಟನೆಯನ್ನೂ ನೆರವೇರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.</p>.<p>ಇಲ್ಲಿನ ಲಹ್ನು ಮೈದಾನದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನರು ರಾಜ್ಯ ಹಾಗೂ ಕೇಂದ್ರ ಎರಡರಲ್ಲಿಯೂ ಬಿಜೆಪಿಯನ್ನು ಆಯ್ಕೆ ಮಾಡಿರುವುದರಿಂದ ಈ ಅಭಿವೃದ್ಧಿ ಸಾಧ್ಯವಾಗಿದೆ ಎಂದರು.</p>.<p>ಎಐಐಎಂಎಸ್(ಏಮ್ಸ್) ಮತ್ತು ಹೈಡ್ರೋ ಎಂಜಿನಿಯರಿಂಗ್ ಕಾಲೇಜಿಗೆ ಪ್ರಧಾನಿ ಚಾಲನೆ ನೀಡಿದರು. ದೇಶವನ್ನು ರಕ್ಷಣೆ ಮಾಡುವಲ್ಲಿ ಹಿಮಾಚಲ ಪ್ರದೇಶ ಮಹತ್ವದ ಪಾತ್ರ ವಹಿಸಿದೆ. ಈಗ ಏಮ್ಸ್ ಬಿಸ್ಲಾಪುರದೊಂದಿಗೆ ಜೀವ ರಕ್ಷಣೆಯಲ್ಲಿಯೂ ಪ್ರಮುಖ ಪಾತ್ರ ವಹಿಸಲಿದೆ ಎಂದು ಪ್ರಧಾನಿ ಹೇಳಿದರು.</p>.<p>ಮುಂದಿನ ಎರಡು ತಿಂಗಳೊಳಗೆ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಅದರ ಬೆನ್ನಲ್ಲೇ ಪ್ರಧಾನಿ ಬಹಿರಂಗ ಸಭೆ ಆಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>