ಸ್ವಾತಂತ್ರ್ಯ ಹೋರಾಟದ ಭಾಗವಾಗಿ ಮಹಾತ್ಮ ಗಾಂಧಿಯವರು 1922ರಲ್ಲಿ ದೇಶದಾದ್ಯಂತ ಮಹಾತ್ಮ ಗಾಂಧಿ ಅವರು ಅಸಹಕಾರ ಚಳವಳಿ ಆರಂಭಿಸಿದ್ದರು. ಇದೇ ವೇಳೆ ಚೌರಿಚೌರಾದಲ್ಲಿ ನಡೆದಿದ್ದ ಚಳವಳಿಯಲ್ಲಿ ಭಾಗವಹಿಸಿದ್ದವರ ಮೇಲೆ ಪೊಲೀಸರು ಗುಂಡು ಹಾರಿಸಿದರು. ಘಟನೆಯಲ್ಲಿ ಕೆಲ ಹೋರಾಟಗಾರರ ಸಾವನ್ನಪ್ಪಿದರು. ಆಗ, ರೊಚ್ಚಿಗೆದ್ದ ಹೋರಾಟಗಾರರು ಚೌರಿಚೌರಾ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಅದಕ್ಕೆ ಬೆಂಕಿ ಹಚ್ಚಿದ್ದರು. ಈ ಘಟನೆಯಲ್ಲಿ, ಠಾಣೆಯಲ್ಲಿದ್ದ ಹಲವರು ಮೃತಪಟ್ಟಿದ್ದರು.