‘ವಿಜ್ಞಾನ, ಸಂಶೋಧನೆ ಹಾಗೂ ಆವಿಷ್ಕಾರವು ಜ್ಞಾನಾಧಾರಿತ ಆರ್ಥಿಕತೆಯ ಬುನಾದಿಗಳಾಗಿವೆ. ಈ ಕ್ಷೇತ್ರಗಳಲ್ಲಿ ಭಾರತದ ಸ್ಥಾನವನ್ನು ಇನ್ನಷ್ಟು ಉತ್ತಮಪಡಿಸಬೇಕು. ಇದಕ್ಕೆ ಶಾಲಾ ಹಂತದಲ್ಲೇ ಅಡಿಪಾಯ ಹಾಕಬೇಕು. ಶಿಕ್ಷಕರು ಮಕ್ಕಳಲ್ಲಿ ಪ್ರಶ್ನೆ ಕೇಳುವ ಹಾಗೂ ಅನುಮಾನ ವ್ಯಕ್ತಪಡಿಸುವ ಮನೋಭಾವ ಬೆಳೆಸಬೇಕು. ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸುವ ಹಾಗೂ ಅವರ ಅನುಮಾನಗಳನ್ನು ಪರಿಹರಿಸುವುದರಿಂದ ಶಿಕ್ಷಕರ ಜ್ಞಾನವೂ ಹೆಚ್ಚುತ್ತದೆ’ ಎಂದಿದ್ದಾರೆ.