ಕಳೆದ ವರ್ಷದ ಡಿಸೆಂಬರ್ನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಭಾರತದ ಸಶಸ್ತ್ರಪಡೆಗಳಮೊದಲ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಹಿಂದೂ ಧಾರ್ಮಿಕ ಪುಸ್ತಕಗಳನ್ನು ಪ್ರಕಟಿಸುತ್ತಿದ್ದ ಗೀತಾ ಪ್ರೆಸ್ ಮಾಜಿ ಮುಖ್ಯಸ್ಥ ರಾಧೆಶ್ಯಾಮ್ ಖೆಮ್ಕಾ ಅವರಿಗೆ ಮರಣೋತ್ತರವಾಗಿದೇಶದ 2ನೇ ನಾಗರಿಕ ಪುರಸ್ಕಾರವಾದ ಪದ್ಮವಿಭೂಷಣ ನೀಡಲಾಗಿದೆ. ಇನ್ನು ಕಾಂಗ್ರೆಸ್ ನಾಯಕ ಗುಲಾಂ ಆಜಾದ್, ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್, ಮಾಜಿ ಸಿಎಜಿ ಮೆಹ್ರೆಷಿ, ಭಾರತದಲ್ಲಿ ಕೋವಿಶೀಲ್ಡ್ ಲಸಿಕೆ ಉತ್ಪಾದನೆ ಮಾಡಿದ ಸೀರಂ ಸಂಸ್ಥೆಯ ಸಂಸ್ಥಾಪಕ ಸೈರಸ್ ಪೂನಾವಾಲ ಅವರು ಸೇರಿದಂತೆ 8 ಗಣ್ಯರಿಗೆ ದೇಶದ 3ನೇ ಅತ್ಯುನ್ನತ ನಾಗರಿಕ ಪುರಸ್ಕಾರವಾದ ಪದ್ಮಭೂಷಣ ಪ್ರದಾನ ಮಾಡಲಾಗಿದೆ.