ನವದೆಹಲಿ: ಶ್ರೀರಾಮನವಮಿ ಹಬ್ಬದ ಪ್ರಯುಕ್ತ ನಾಡಿನಾದ್ಯಂತ ಇಂದು (ಗುರುವಾರ) ಸಂಭ್ರಮ ಮನೆಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನವಮಿ ಅಂಗವಾಗಿ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.
‘ಎಲ್ಲರಿಗೂ ರಾಮನವಮಿಯ ಹಬ್ಬದ ಹಾರ್ದಿಕ ಶುಭಾಶಯಗಳು. ಭಗವಾನ್ ಶ್ರೀರಾಮನ ಜೀವನವು ತ್ಯಾಗ, ಸಂಯಮ ಮತ್ತು ಸಂಕಲ್ಪವನ್ನು ಆಧರಿಸಿದೆ. ಪ್ರತಿ ಯುಗದಲ್ಲೂ ಮಾನವೀಯತೆಗೆ ಸ್ಫೂರ್ತಿಯಾಗಿ ಉಳಿಯುತ್ತದೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
रामनवमी के पावन-पुनीत अवसर पर समस्त देशवासियों को अनेकानेक शुभकामनाएं। त्याग, तपस्या, संयम और संकल्प पर आधारित मर्यादा पुरुषोत्तम भगवान रामचंद्र का जीवन हर युग में मानवता की प्रेरणाशक्ति बना रहेगा।
— Narendra Modi (@narendramodi) March 30, 2023
‘ಎಲ್ಲರಿಗೂ ರಾಮನವಮಿಯ ಹಬ್ಬದ ಹಾರ್ದಿಕ ಶುಭಾಶಯಗಳು. ಪುರುಷೋತ್ತಮ ಪ್ರಭು ಶ್ರೀರಾಮ, ಧರ್ಮ ಮತ್ತು ಸತ್ಯದ ಹಾದಿಯಲ್ಲಿ ನಡೆಯುವುದರೊಂದಿಗೆ ಇಡೀ ಮಾನವ ಜಗತ್ತಿಗೆ ಸಂದಿಗ್ಧ ಪರಿಸ್ಥಿತಿಗಳಲ್ಲಿ ಸಹ ತಾಳ್ಮೆ ಮತ್ತು ದಯೆಯ ಭಾವನೆಯನ್ನು ಹೊಂದಿರಲು ಕಲಿಸಿದ್ದಾರೆ. ಶ್ರೀರಾಮ ಎಲ್ಲರಿಗೂ ಆಶೀರ್ವಾದ ನೀಡಲಿ ಜೈ ಶ್ರೀ ರಾಮ್!’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
सभी को रामनवमी के महापर्व की हार्दिक शुभकामनाएँ।
— Amit Shah (@AmitShah) March 30, 2023
मर्यादा पुरुषोतम प्रभु श्रीराम ने धर्म और सत्य के मार्ग पर चलने के साथ विकट परिस्थितियों में भी धैर्य और सभी के लिए एक समान दयालुता के भाव की शिक्षा पूरे मानव जगत को दी।
प्रभु श्रीराम सभी पर अपनी कृपा बनाये।
जय श्रीराम! pic.twitter.com/sZlvxyCBmv
ಓದಿ... ಶ್ರೀರಾಮ: ಆದರ್ಶ ರಾಜ
ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ.
ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ.
ನಿನ್ನಿಷ್ಟದಂತೆನ್ನ ಇಟ್ಟಿರುವೆ ರಾಮ.
ನನ್ನಿಷ್ಟದಂತೆಲ್ಲ ಕೊಟ್ಟಿರುವೆ ರಾಮ..
ನಾಡಿನ ಸಮಸ್ತ ಜನತೆಗೆ ಶ್ರೀ ಮರ್ಯಾದಾ ಪುರುಷೋತ್ತಮ, ಶ್ರೀ ರಾಮನವಮಿಯ ಹಾರ್ದಿಕ ಶುಭಾಶಯಗಳು. ಪ್ರಭು ರಾಮಚಂದ್ರ ಸರ್ವರ ಬಾಳಿನಲ್ಲಿ ಒಳಿತನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ.
— Basavaraj S Bommai (@BSBommai) March 30, 2023
ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ.
ನಿನ್ನಿಷ್ಟದಂತೆನ್ನ ಇಟ್ಟಿರುವೆ ರಾಮ.
ನನ್ನಿಷ್ಟದಂತೆಲ್ಲ ಕೊಟ್ಟಿರುವೆ ರಾಮ..
ನಾಡಿನ ಸಮಸ್ತ ಜನತೆಗೆ ಶ್ರೀ ಮರ್ಯಾದಾ ಪುರುಷೋತ್ತಮ, ಶ್ರೀ ರಾಮನವಮಿಯ ಹಾರ್ದಿಕ ಶುಭಾಶಯಗಳು. ಪ್ರಭು ರಾಮಚಂದ್ರ ಸರ್ವರ ಬಾಳಿನಲ್ಲಿ ಒಳಿತನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/jNR0W2h8vf
ಆದರ್ಶ ಪುರುಷ ಶ್ರೀರಾಮನು ಹಾಕಿಕೊಟ್ಟ ಪ್ರೀತಿ, ಸಹಾನುಭೂತಿ, ಅಂತಃಕರಣ, ನ್ಯಾಯಪರಿಪಾಲನೆಯ ಹಾದಿಯಲ್ಲಿ ಮುನ್ನಡೆಯೋಣ. ಪಾನಕ, ಕೋಸಂಬರಿಯ ಜೊತೆ ಸ್ನೇಹ, ಸೌಹಾರ್ದತೆ ಮಿಳಿತಗೊಳ್ಳಲಿ, ಮನುಷ್ಯಪ್ರೇಮದ ಬೆಳಕು ಜಗದಗಲ ಬೆಳಗಲಿ. ನಾಡಿನ ಸಮಸ್ತ ಜನತೆಗೆ ರಾಮನವಮಿಯ ಶುಭಹಾರೈಕೆಗಳು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಆದರ್ಶ ಪುರುಷ ಶ್ರೀರಾಮನು ಹಾಕಿಕೊಟ್ಟ ಪ್ರೀತಿ, ಸಹಾನುಭೂತಿ, ಅಂತಃಕರಣ, ನ್ಯಾಯಪರಿಪಾಲನೆಯ ಹಾದಿಯಲ್ಲಿ ಮುನ್ನಡೆಯೋಣ.
— Siddaramaiah (@siddaramaiah) March 30, 2023
ಪಾನಕ, ಕೋಸಂಬರಿಯ ಜೊತೆ ಸ್ನೇಹ, ಸೌಹಾರ್ದತೆ ಮಿಳಿತಗೊಳ್ಳಲಿ, ಮನುಷ್ಯಪ್ರೇಮದ ಬೆಳಕು ಜಗದಗಲ ಬೆಳಗಲಿ.
ನಾಡಿನ ಸಮಸ್ತ ಜನತೆಗೆ ರಾಮನವಮಿಯ ಶುಭಹಾರೈಕೆಗಳು. pic.twitter.com/91i9acO41f
ಶ್ರೀರಾಮನವಮಿ ಹಬ್ಬವಷ್ಟೇ ಅಲ್ಲ, ಕೆಡುಕನ್ನು ಸೋಲಿಸಿದ ಪ್ರತೀಕ, ಸುಳ್ಳಿನ ವಿರುದ್ಧ ಸತ್ಯ ಜಯಿಸಿದ ಸಂಕೇತ. ಸದಾಚಾರದ ಮಾರ್ಗವನ್ನು ಅನುಸರಿಸಲು, ಸಹಾನುಭೂತಿ, ಸಾಮರಸ್ಯದ ಬೆಳಕನ್ನು ತೋರುವ ಸತ್ಯದ ದಾರಿ. ಸರ್ವರನ್ನೂ ಸಮನಾಗಿ ಕಂಡ ಆ ಮರ್ಯಾದ ಪುರುಷೋತ್ತಮ ಶ್ರೀರಾಮ ದೇವರು ನಮ್ಮೆಲ್ಲರಿಗೂ ಆದರ್ಶ. ಎಲ್ಲರಿಗೂ ಶ್ರೀರಾಮ ನವಮಿ ಶುಭಾಶಯಗಳು ಎಂದು ಜಿಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಶ್ರೀರಾಮನವಮಿ ಹಬ್ಬವಷ್ಟೇ ಅಲ್ಲ, ಕೆಡುಕನ್ನು ಸೋಲಿಸಿದ ಪ್ರತೀಕ, ಸುಳ್ಳಿನ ವಿರುದ್ಧ ಸತ್ಯ ಜಯಿಸಿದ ಸಂಕೇತ. ಸದಾಚಾರದ ಮಾರ್ಗವನ್ನು ಅನುಸರಿಸಲು, ಸಹಾನುಭೂತಿ, ಸಾಮರಸ್ಯದ ಬೆಳಕನ್ನು ತೋರುವ ಸತ್ಯದ ದಾರಿ. ಸರ್ವರನ್ನೂ ಸಮನಾಗಿ ಕಂಡ ಆ ಮರ್ಯಾದ ಪುರುಷೋತ್ತಮ ಶ್ರೀರಾಮ ದೇವರು ನಮ್ಮೆಲ್ಲರಿಗೂ ಆದರ್ಶ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 30, 2023
ಎಲ್ಲರಿಗೂ ಶ್ರೀರಾಮ ನವಮಿ ಶುಭಾಶಯಗಳು. pic.twitter.com/dSiOdcw6UX
ನಾಡಿನ ಸಮಸ್ತ ಜನತೆಗೆ ಶ್ರೀ ರಾಮನವಮಿಯ ಶುಭಾಶಯಗಳು. ಪ್ರಜೆಗಳನ್ನು ದೇವರಂತೆ ಕಂಡ, ಸತ್ಯ ಮಾರ್ಗದಲ್ಲಿ ನಡೆದ ಪ್ರಭು ಶ್ರೀರಾಮನ ಅನುಗ್ರಹ ಸರ್ವರ ಮೇಲೂ ಇರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ನಾಡಿನ ಸಮಸ್ತ ಜನತೆಗೆ ಶ್ರೀ ರಾಮನವಮಿಯ ಶುಭಾಶಯಗಳು.
— DK Shivakumar (@DKShivakumar) March 30, 2023
ಪ್ರಜೆಗಳನ್ನು ದೇವರಂತೆ ಕಂಡ, ಸತ್ಯ ಮಾರ್ಗದಲ್ಲಿ ನಡೆದ ಪ್ರಭು ಶ್ರೀರಾಮನ ಅನುಗ್ರಹ ಸರ್ವರ ಮೇಲೂ ಇರಲಿ.#ರಾಮನವಮಿ #RamNavmi pic.twitter.com/nAyDBD1pBF
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.