ಮುಂಬೈ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 'ಗಾನ ಕೋಗಿಲೆ' ಮಂಗೇಶ್ಕರ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.
ಭಾನುವಾರ ಸಂಜೆ 5 ಗಂಟೆಗೆ ಮುಂಬೈಗೆ ಬಂದಿಳಿದ ಅವರು, ನೇರವಾಗಿ ಶಿವಾಜಿ ಪಾರ್ಕ್ಗೆ ತೆರಳಿದರು. ಅಲ್ಲಿ ಲತಾ ಮಂಗೇಶ್ಕರ್ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ, ಸಚಿವ ಆದಿತ್ಯ ಠಾಕ್ರೆ, ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್ ಬರಮಾಡಿಕೊಂಡರು.
ಲತಾ ಅವರ ಅಂತಿಮ ವಿಧಿ ವಿಧಾನಗಳಲ್ಲಿ ಮಹಾರಾಷ್ಟ್ರ ಮೂಲದ ಎಲ್ಲ ಕೇಂದ್ರ ಮಂತ್ರಿಗಳೂ ಭಾಗವಹಿಸಿದ್ದಾರೆ.
ಭಾರತ ರತ್ನ ಪುರಸ್ಕೃತೆ, ಗಾಯಕಿ ಲತಾ ಮಂಗೇಶ್ಕರ್ (92) ಅವರು ಇಂದು ನಿಧನರಾದರು. ಕೋವಿಡ್–19 ದೃಢಪಟ್ಟ ಹಿನ್ನೆಲೆ ಚಿಕಿತ್ಸೆಗಾಗಿ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಜನವರಿ 8ರಂದು ದಾಖಲಾಗಿದ್ದರು. ಕೆಲವು ವಾರಗಳಿಂದ ಅವರು ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದರು.
ಇತ್ತೀಚೆಗೆ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಾಣಿಸಿಕೊಂಡಿತ್ತಾದರೂ, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ, ಭಾನುವಾರ ಬೆಳಿಗ್ಗೆ ಅವರು ಅಗಲಿದ್ದಾರೆ.
Prime Minister Narendra Modi pays last respect to veteran singer Lata Mangeshkar in Mumbai pic.twitter.com/2WtTe9aXgT
#WATCH | Cricketer Sachin Tendulkar and actor Shah Rukh Khan pay last respect to veteran singer Lata Mangeshkar at Mumbai's Shivaji Park pic.twitter.com/r22Njpi4XW