<p><strong>ನವದೆಹಲಿ: </strong>ತಿಂಗಳ ರೇಡಿಯೊ ಕಾರ್ಯಕ್ರಮ 'ಮನ್ ಕಿ ಬಾತ್'ನ 76ನೇ ಕಂತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಭಾನುವಾರ ಬೆಳಿಗ್ಗೆ 11ಗಂಟೆ ಕಾರ್ಯಕ್ರಮ ಪ್ರಸಾರವಾಗಲಿದೆ.</p>.<p>ದೇಶದಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದ್ದು, ನಿತ್ಯ 3 ಲಕ್ಷಕ್ಕೂ ಅಧಿಕ ಸೋಂಕು ಪ್ರಕರಣಗಳು ದಾಖಲಾಗುತ್ತಿವೆ. 2,500ಕ್ಕೂ ಹೆಚ್ಚು ಜನರು ಸೋಂಕಿನಿಂದ ಸಾವಿಗೀಡಾಗುತ್ತಿರುವುದು ವರದಿಯಾಗುತ್ತಿದೆ. ಹಲವು ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರ ಇಂದಿನ ಮಕ್ ಕಿ ಬಾತ್ ಮಹತ್ವ ಪಡೆದಿದೆ.</p>.<p>ಕಳೆದ ರೇಡಿಯೊ ಕಾರ್ಯಕ್ರಮದಲ್ಲಿ ಎಲ್ಲ ನಾಗರಿಕರಿಗೆ ಕೋವಿಡ್–19 ಲಸಿಕೆ ಹಾಕಿಸಿಕೊಳ್ಳುವಂತೆ ಕರೆ ನೀಡಿದರು. ಕೃಷಿ ಕ್ಷೇತ್ರದಲ್ಲಿ ಸಾಂಪ್ರದಾಯಿಕ ವ್ಯವಸಾಯದೊಂದಿಗೆ ಪರ್ಯಾಯ ಪದ್ಧತಿಗಳನ್ನು ಅಳವಡಿಸಿಕೊಳ್ಳುವಂತೆ ರೈತರಿಗೆ ಸಲಹೆ ನೀಡಿದರು. ಹಾಗೇ ಸರ್ಕಾರವು ಕೃಷಿ ಕ್ಷೇತ್ರದ ಆಧುನಿಕತೆಗೆ ಬದ್ಧವಾಗಿದೆ ಎಂದರು.</p>.<p>ಆಕಾಶವಾಣಿ (ಎಐಆರ್) ಮತ್ತು ದೂರದರ್ಶನದಲ್ಲಿ ಪ್ರಧಾನಿ ಮೋದಿ ಅವರ 'ಮನ್ ಕಿ ಬಾತ್' ಪ್ರಸಾರವಾಗಲಿದೆ. ಎಐಆರ್ ನ್ಯೂಸ್ ವೆಬ್ಸೈಟ್ನಲ್ಲೂ (www.newsonair.com) ಪ್ರಧಾನಿ ಮಾತು ಕೇಳಬಹುದಾಗಿದೆ. ಎಐಆರ್, ಡಿಡಿ ನ್ಯೂಸ್, ಪಿಎಂಒ ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯುಟ್ಯೂಬ್ ಚಾನೆಲ್ಗಳಲ್ಲಿಯೂ ಕೇಳಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ತಿಂಗಳ ರೇಡಿಯೊ ಕಾರ್ಯಕ್ರಮ 'ಮನ್ ಕಿ ಬಾತ್'ನ 76ನೇ ಕಂತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಭಾನುವಾರ ಬೆಳಿಗ್ಗೆ 11ಗಂಟೆ ಕಾರ್ಯಕ್ರಮ ಪ್ರಸಾರವಾಗಲಿದೆ.</p>.<p>ದೇಶದಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದ್ದು, ನಿತ್ಯ 3 ಲಕ್ಷಕ್ಕೂ ಅಧಿಕ ಸೋಂಕು ಪ್ರಕರಣಗಳು ದಾಖಲಾಗುತ್ತಿವೆ. 2,500ಕ್ಕೂ ಹೆಚ್ಚು ಜನರು ಸೋಂಕಿನಿಂದ ಸಾವಿಗೀಡಾಗುತ್ತಿರುವುದು ವರದಿಯಾಗುತ್ತಿದೆ. ಹಲವು ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರ ಇಂದಿನ ಮಕ್ ಕಿ ಬಾತ್ ಮಹತ್ವ ಪಡೆದಿದೆ.</p>.<p>ಕಳೆದ ರೇಡಿಯೊ ಕಾರ್ಯಕ್ರಮದಲ್ಲಿ ಎಲ್ಲ ನಾಗರಿಕರಿಗೆ ಕೋವಿಡ್–19 ಲಸಿಕೆ ಹಾಕಿಸಿಕೊಳ್ಳುವಂತೆ ಕರೆ ನೀಡಿದರು. ಕೃಷಿ ಕ್ಷೇತ್ರದಲ್ಲಿ ಸಾಂಪ್ರದಾಯಿಕ ವ್ಯವಸಾಯದೊಂದಿಗೆ ಪರ್ಯಾಯ ಪದ್ಧತಿಗಳನ್ನು ಅಳವಡಿಸಿಕೊಳ್ಳುವಂತೆ ರೈತರಿಗೆ ಸಲಹೆ ನೀಡಿದರು. ಹಾಗೇ ಸರ್ಕಾರವು ಕೃಷಿ ಕ್ಷೇತ್ರದ ಆಧುನಿಕತೆಗೆ ಬದ್ಧವಾಗಿದೆ ಎಂದರು.</p>.<p>ಆಕಾಶವಾಣಿ (ಎಐಆರ್) ಮತ್ತು ದೂರದರ್ಶನದಲ್ಲಿ ಪ್ರಧಾನಿ ಮೋದಿ ಅವರ 'ಮನ್ ಕಿ ಬಾತ್' ಪ್ರಸಾರವಾಗಲಿದೆ. ಎಐಆರ್ ನ್ಯೂಸ್ ವೆಬ್ಸೈಟ್ನಲ್ಲೂ (www.newsonair.com) ಪ್ರಧಾನಿ ಮಾತು ಕೇಳಬಹುದಾಗಿದೆ. ಎಐಆರ್, ಡಿಡಿ ನ್ಯೂಸ್, ಪಿಎಂಒ ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯುಟ್ಯೂಬ್ ಚಾನೆಲ್ಗಳಲ್ಲಿಯೂ ಕೇಳಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>