ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಪಕ್ಷದ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ವರ್ಚುವಲ್ ಸಂವಾದ

Last Updated 18 ಜನವರಿ 2022, 3:02 IST
ಅಕ್ಷರ ಗಾತ್ರ

ನವದೆಹಲಿ: ಪಂಚರಾಜ್ಯ ಚುನಾವಣೆ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಅವರ ಕ್ಷೇತ್ರ ಉತ್ತರ ಪ್ರದೇಶದ ವಾರಾಣಸಿಯ ಬಿಜೆಪಿ ಕಾರ್ಯಕರ್ತರ ಜತೆ ಸಂವಾದ ನಡೆಸಲಿದ್ದಾರೆ.

ಮಂಗಳವಾರ ಬೆಳಗ್ಗೆ 11 ಗಂಟೆಗೆ, ನಮೋ ಆ್ಯಪ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಕಾಶಿ ಮತ್ತು ವಾರಾಣಸಿಯಲ್ಲಿನ ಕಾರ್ಯಕರ್ತರ ಜತೆ ಸಂವಾದದಲ್ಲಿ ಪಾಲ್ಗೊಳ್ಳುವರು ಎಂದು ಬಿಜೆಪಿ ಕಾಶಿ ಘಟಕದ ಅಧ್ಯಕ್ಷ ಮಹೇಶ್ ಚಂದ್ರ ಶ್ರೀವಾಸ್ತವ ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆ ಕುರಿತಂತೆ, ಪಕ್ಷದ ಕಾರ್ಯಕರ್ತರು ತಮ್ಮ ಅನಿಸಿಕೆ, ಸಲಹೆ, ಸೂಚನೆಗಳನ್ನು ಆ್ಯಪ್ ಮೂಲಕ ಪ್ರಧಾನಿಯವರ ಜತೆ ಹಂಚಿಕೊಳ್ಳಬಹುದಾಗಿದೆ.

ಕೋವಿಡ್ ನಿರ್ಬಂಧಗಳು ಇರುವುದರಿಂದ, ಜನರ ಜತೆ ಸಂವಾದ ನಡೆಸಲು ಆ್ಯಪ್ ಮೂಲಕ ಅವಕಾಶ ಕಲ್ಪಿಸಲಾಗಿದೆ ಎಂದು ಮಹೇಶ್‌ ಚಂದ್ರ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT