ಕಲಬುರಗಿಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿಯ ಸಿದ್ಧತೆಗಳ ಕುರಿತು ಚರ್ಚೆ ನಡೆಸಲಾಯಿತು. ಕಾರ್ಯಕ್ರಮಕ್ಕಾಗಿ ಬೃಹತ್ ಹೆಲಿಪ್ಯಾಡ್ ನಿರ್ಮಿಸಲಾಗುತ್ತಿದೆ. ಅಡುಗೆ ಮಾಡಲು 600 ಬಾಣಸಿಗರನ್ನು ನಿಯೋಜಿಸಲಾಗುವುದು. 200 ಊಟದ ಕೌಂಟರ್ಗಳನ್ನು ತೆರೆಯಲಾಗುತ್ತದೆ. ತಾಂಡಾ ಫಲಾನುಭವಿಗಳನ್ನು ಕರೆತರಲು 2,582 ಬಸ್ಗಳನ್ನು ನಿಯೋಜಿಸಲಾಗಿದೆ.