<p><strong>ಜೈಪುರ</strong>: ‘ಹೊಸ ಕೃಷಿ ಕಾಯ್ದೆಗಳ ಮೂಲಕ ತಮ್ಮ ಸ್ನೇಹಿತರಿಗೆ ಮುಕ್ತ ಮಾರ್ಗ ಕಲ್ಪಿಸಲು ಪ್ರಧಾನಿ ನರೇಂದ್ರ ಮೋದಿ ಯತ್ನಿಸುತ್ತಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟೀಕಿಸಿದ್ದಾರೆ.</p>.<p>ರಾಜಸ್ಥಾನದ ಹನುಮಾನಗಢ ಜಿಲ್ಲೆಯ ಪಿಲಿಬಂಗಾ ನಗರದಲ್ಲಿ ರೈತರ ’ಮಹಾಪಂಚಾಯತ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಹೊಸ ಕೃಷಿ ಕಾಯ್ದೆಗಳು ಶೇಕಡ 40ರಷ್ಟು ಭಾರತೀಯರ ಮೇಲೆ ಪರಿಣಾಮ ಬೀರಲಿವೆ.ರೈತರು, ವ್ಯಾಪಾರಿಗಳು ಮತ್ತು ಕಾರ್ಮಿಕರು ಸಂಕಷ್ಟಕ್ಕೆ ಸಿಲುಕುತ್ತಾರೆ’ ಎಂದು ಹೇಳಿದ್ದಾರೆ.</p>.<p>‘ನೋಟು ರದ್ದು ಹಾಗೂ ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್ಟಿ) ಬಳಿಕ, ಕೇಂದ್ರ ಸರ್ಕಾರ ಈಗ ಕೃಷಿ ಕಾಯ್ದೆಗಳ ಮೂಲಕ ದೇಶದ ಜನತೆಯನ್ನು ಈಗ ಸಂಕಷ್ಟಕ್ಕೆ ಸಿಲುಕಿಸುತ್ತಿದೆ’ ಎಂದು ದೂರಿದರು.</p>.<p>‘ನೋಟುಗಳನ್ನು ರದ್ದುಗೊಳಿಸಿದಾಗ ಇದು ಕಪ್ಪು ಹಣ ನಿಯಂತ್ರಿಸಲು ಕೈಗೊಂಡ ನಿರ್ಧಾರವಲ್ಲ ಎಂದು ಹೇಳಿದ್ದೆ. ಆದರೆ, ಆ ಸಂದರ್ಭದಲ್ಲಿ ಜನರು ನನ್ನ ಮಾತನ್ನು ಅರ್ಥ ಮಾಡಿಕೊಳ್ಳಲಿಲ್ಲ. ಬಳಿಕ ಜಿಎಸ್ಟಿ ಅನುಷ್ಠಾನಗೊಳಿಸಲಾಯಿತು. ಈ ಮೂಲಕ ಸಣ್ಣ ಮತ್ತು ಮಧ್ಯಮ ವರ್ಗದ ವ್ಯಾಪಾರಿಗಳ ಮೇಲೆ ದಾಳಿ ಮಾಡಲಾಯಿತು. ಈ ರೀತಿಯ ವ್ಯವಸ್ಥೆಗಳ ಮೂಲಕ ತಮ್ಮ ಸ್ನೇಹಿತರಿಗೆ ಮುಕ್ತ ಮಾರ್ಗ ಮತ್ತು ವಾತಾವರಣ ಕಲ್ಪಿಸಲು ಪ್ರಧಾನಿ ನರೇಂದ್ರ ಮೋದಿ ಯತ್ನಿಸುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>‘ರೈತರು, ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳ ಶಕ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅರ್ಥ ಮಾಡಿಕೊಂಡಿಲ್ಲ’ ಎಂದು ರಾಹುಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ‘ಹೊಸ ಕೃಷಿ ಕಾಯ್ದೆಗಳ ಮೂಲಕ ತಮ್ಮ ಸ್ನೇಹಿತರಿಗೆ ಮುಕ್ತ ಮಾರ್ಗ ಕಲ್ಪಿಸಲು ಪ್ರಧಾನಿ ನರೇಂದ್ರ ಮೋದಿ ಯತ್ನಿಸುತ್ತಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟೀಕಿಸಿದ್ದಾರೆ.</p>.<p>ರಾಜಸ್ಥಾನದ ಹನುಮಾನಗಢ ಜಿಲ್ಲೆಯ ಪಿಲಿಬಂಗಾ ನಗರದಲ್ಲಿ ರೈತರ ’ಮಹಾಪಂಚಾಯತ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಹೊಸ ಕೃಷಿ ಕಾಯ್ದೆಗಳು ಶೇಕಡ 40ರಷ್ಟು ಭಾರತೀಯರ ಮೇಲೆ ಪರಿಣಾಮ ಬೀರಲಿವೆ.ರೈತರು, ವ್ಯಾಪಾರಿಗಳು ಮತ್ತು ಕಾರ್ಮಿಕರು ಸಂಕಷ್ಟಕ್ಕೆ ಸಿಲುಕುತ್ತಾರೆ’ ಎಂದು ಹೇಳಿದ್ದಾರೆ.</p>.<p>‘ನೋಟು ರದ್ದು ಹಾಗೂ ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್ಟಿ) ಬಳಿಕ, ಕೇಂದ್ರ ಸರ್ಕಾರ ಈಗ ಕೃಷಿ ಕಾಯ್ದೆಗಳ ಮೂಲಕ ದೇಶದ ಜನತೆಯನ್ನು ಈಗ ಸಂಕಷ್ಟಕ್ಕೆ ಸಿಲುಕಿಸುತ್ತಿದೆ’ ಎಂದು ದೂರಿದರು.</p>.<p>‘ನೋಟುಗಳನ್ನು ರದ್ದುಗೊಳಿಸಿದಾಗ ಇದು ಕಪ್ಪು ಹಣ ನಿಯಂತ್ರಿಸಲು ಕೈಗೊಂಡ ನಿರ್ಧಾರವಲ್ಲ ಎಂದು ಹೇಳಿದ್ದೆ. ಆದರೆ, ಆ ಸಂದರ್ಭದಲ್ಲಿ ಜನರು ನನ್ನ ಮಾತನ್ನು ಅರ್ಥ ಮಾಡಿಕೊಳ್ಳಲಿಲ್ಲ. ಬಳಿಕ ಜಿಎಸ್ಟಿ ಅನುಷ್ಠಾನಗೊಳಿಸಲಾಯಿತು. ಈ ಮೂಲಕ ಸಣ್ಣ ಮತ್ತು ಮಧ್ಯಮ ವರ್ಗದ ವ್ಯಾಪಾರಿಗಳ ಮೇಲೆ ದಾಳಿ ಮಾಡಲಾಯಿತು. ಈ ರೀತಿಯ ವ್ಯವಸ್ಥೆಗಳ ಮೂಲಕ ತಮ್ಮ ಸ್ನೇಹಿತರಿಗೆ ಮುಕ್ತ ಮಾರ್ಗ ಮತ್ತು ವಾತಾವರಣ ಕಲ್ಪಿಸಲು ಪ್ರಧಾನಿ ನರೇಂದ್ರ ಮೋದಿ ಯತ್ನಿಸುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>‘ರೈತರು, ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳ ಶಕ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅರ್ಥ ಮಾಡಿಕೊಂಡಿಲ್ಲ’ ಎಂದು ರಾಹುಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>