<p><strong>ಲಖನೌ</strong>: ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲವನ್ನು ಪೂರ್ಣ ಮನ್ನಾ ಮಾಡುವುದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಘೋಷಿಸಿದರು.</p>.<p>ಅವರು ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಕಾಂಗ್ರೆಸ್ನ ‘ಪ್ರತಿಜ್ಞಾ ಯಾತ್ರೆ’ಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು.</p>.<p>12ನೇ ತರಗತಿ ತೇರ್ಗಡೆಯಾದ ಬಾಲಕಿಯರಿಗೆ ಸ್ಮಾರ್ಟ್ಫೋನ್ಗಳು ಮತ್ತು ಪದವೀಧರ ಬಾಲಕಿಯರಿಗೆ ಇ-ಸ್ಕೂಟಿ ಜೊತೆಗೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ 40 ರಷ್ಟು ಟಿಕೆಟ್ ನೀಡುವುದಾಗಿ ಈ ಹಿಂದೆ ನೀಡಿದ್ದ ಘೋಷಣೆಗಳನ್ನು ಅವರು ಪುನರುಚ್ಚರಿಸಿದರು.</p>.<p>ರೈತರ ಸಂಪೂರ್ಣ ಸಾಲ ಮನ್ನಾ, ಗೋಧಿಗೆ ₹ 2, 500 ಕನಿಷ್ಠ ಬೆಂಬಲ ಬೆಲೆ, 20 ಲಕ್ಷ ಜನರಿಗೆ ಸರ್ಕಾರಿ ಉದ್ಯೋಗ, ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಆರ್ಥಿಕ ನಷ್ಟ ಎದುರಿಸಿದ ಕುಟುಂಬಗಳಿಗೆ ಸಂಕಷ್ಟದಿಂದ ದೂರ ಬರಲು ₹25,000 ನೆರವು ನೀಡಲಾಗುವುದು. ಅದರ ಜತೆಗೆ ವಿದ್ಯುತ್ ಬಿಲ್ಗಳನ್ನು ಅರ್ಧಕ್ಕೆ ಇಳಿಸಲಾಗುವುದು ಎಂದು ಅವರು ಭರವಸೆ ನೀಡಿದರು.</p>.<p>ವಾರದೊಳಗೆ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ತರಲಾಗುವುದು ಎಂದು ಪ್ರಿಯಾಂಕಾ ಇದೇ ವೇಳೆ ತಿಳಿಸಿದರು.</p>.<p>ಯಾತ್ರೆಯು ರಾಜ್ಯದ ಮೂರು ವಿಭಿನ್ನ ಮಾರ್ಗಗಳಲ್ಲಿ ತೆರಳಲಿದೆ. ಬಾರಾಬಂಕಿಯಿಂದ ಬುಂದೇಲ್ಖಂಡ್, ಸಹರಾನ್ಪುರದಿಂದ ಮಥುರಾ ಮತ್ತು ವಾರಾಣಸಿಯಿಂದ ರಾಯ್ ಬರೇಲಿಯವರೆಗೆ ಯಾತ್ರೆ ಸಾಗಲಿದೆ. ‘ಹಮ್ ವಚನ್ ನಿಭಾಯೇಂಗೆ’ ಘೋಷಣೆಯೊಂದಿಗೆ ಆರಂಭವಾಗಿರುವ ಯಾತ್ರೆಯು ನವೆಂಬರ್ 1ರವರೆಗೆ ವಿವಿಧೆಡೆ ಸಂಚರಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲವನ್ನು ಪೂರ್ಣ ಮನ್ನಾ ಮಾಡುವುದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಘೋಷಿಸಿದರು.</p>.<p>ಅವರು ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಕಾಂಗ್ರೆಸ್ನ ‘ಪ್ರತಿಜ್ಞಾ ಯಾತ್ರೆ’ಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು.</p>.<p>12ನೇ ತರಗತಿ ತೇರ್ಗಡೆಯಾದ ಬಾಲಕಿಯರಿಗೆ ಸ್ಮಾರ್ಟ್ಫೋನ್ಗಳು ಮತ್ತು ಪದವೀಧರ ಬಾಲಕಿಯರಿಗೆ ಇ-ಸ್ಕೂಟಿ ಜೊತೆಗೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ 40 ರಷ್ಟು ಟಿಕೆಟ್ ನೀಡುವುದಾಗಿ ಈ ಹಿಂದೆ ನೀಡಿದ್ದ ಘೋಷಣೆಗಳನ್ನು ಅವರು ಪುನರುಚ್ಚರಿಸಿದರು.</p>.<p>ರೈತರ ಸಂಪೂರ್ಣ ಸಾಲ ಮನ್ನಾ, ಗೋಧಿಗೆ ₹ 2, 500 ಕನಿಷ್ಠ ಬೆಂಬಲ ಬೆಲೆ, 20 ಲಕ್ಷ ಜನರಿಗೆ ಸರ್ಕಾರಿ ಉದ್ಯೋಗ, ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಆರ್ಥಿಕ ನಷ್ಟ ಎದುರಿಸಿದ ಕುಟುಂಬಗಳಿಗೆ ಸಂಕಷ್ಟದಿಂದ ದೂರ ಬರಲು ₹25,000 ನೆರವು ನೀಡಲಾಗುವುದು. ಅದರ ಜತೆಗೆ ವಿದ್ಯುತ್ ಬಿಲ್ಗಳನ್ನು ಅರ್ಧಕ್ಕೆ ಇಳಿಸಲಾಗುವುದು ಎಂದು ಅವರು ಭರವಸೆ ನೀಡಿದರು.</p>.<p>ವಾರದೊಳಗೆ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ತರಲಾಗುವುದು ಎಂದು ಪ್ರಿಯಾಂಕಾ ಇದೇ ವೇಳೆ ತಿಳಿಸಿದರು.</p>.<p>ಯಾತ್ರೆಯು ರಾಜ್ಯದ ಮೂರು ವಿಭಿನ್ನ ಮಾರ್ಗಗಳಲ್ಲಿ ತೆರಳಲಿದೆ. ಬಾರಾಬಂಕಿಯಿಂದ ಬುಂದೇಲ್ಖಂಡ್, ಸಹರಾನ್ಪುರದಿಂದ ಮಥುರಾ ಮತ್ತು ವಾರಾಣಸಿಯಿಂದ ರಾಯ್ ಬರೇಲಿಯವರೆಗೆ ಯಾತ್ರೆ ಸಾಗಲಿದೆ. ‘ಹಮ್ ವಚನ್ ನಿಭಾಯೇಂಗೆ’ ಘೋಷಣೆಯೊಂದಿಗೆ ಆರಂಭವಾಗಿರುವ ಯಾತ್ರೆಯು ನವೆಂಬರ್ 1ರವರೆಗೆ ವಿವಿಧೆಡೆ ಸಂಚರಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>