ಇಂದು ಮುಂಜಾನೆ ಟ್ವೀಟ್ ಮಾಡಿದ್ದ ಪ್ರಿಯಾಂಕಾ ಗಾಂಧಿ ಅವರು, ಲಖಿಂಪುರ–ಖೇರಿಯಲ್ಲಿ ನಡೆದ ದುರ್ಘಟನೆಯ ವಿಡಿಯೊವನ್ನು ಹಂಚಿಕೊಂಡಿದ್ದರು. ಯಾವುದೇ ಎಫ್ಐಆರ್ ಇಲ್ಲದೆ 28 ಗಂಟೆಗಳ ಕಾಲ ನನ್ನನ್ನು ಬಂಧಿಸಲಾಗುತ್ತದೆಯಾದರೆ, ನಾಲ್ವರು ರೈತರನ್ನು ಕೊಂದ ವ್ಯಕ್ತಿಯನ್ನು ಬಂಧಿಸಲಾಗಿಲ್ಲ ಏಕೆ ಎಂದು ಅವರು ಪ್ರಶ್ನೆ ಮಾಡಿದ್ದರು.