ಈ ವಿಚಾರವಾಗಿ ಸುದ್ದಿಸಂಸ್ಥೆ ಪಿಟಿಐಗೆ ಹೇಳಿಕೆ ನೀಡಿರುವ ಅವರು, 'ಉತ್ತರ ಪ್ರದೇಶದ ಮತದಾರರ ಮುಂದೆ ತಮ್ಮನ್ನು ತಾವು ಹೇಗೆ ಪ್ರಸ್ತುತ ಪಡಿಸಿಕೊಳ್ಳಬೇಕು ಎಂಬುದನ್ನು ಪ್ರಿಯಾಂಕಾ ಅವರೇ ನಿರ್ಧರಿಸಲಿದ್ದಾರೆ. ಅವರು ರಾಜ್ಯದಲ್ಲಿ ಪಕ್ಷದ ಉಸ್ತುವಾರಿಯನ್ನು ಮುನ್ನಡೆಸಲಿದ್ದಾರೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪ್ರಿಯಾಂಕಾ ಗಾಂಧಿಯೇ ಕ್ಯಾಪ್ಟನ್' ಎಂದು ಸಲ್ಮಾನ್ ಖುರ್ಷಿದ್ ಪ್ರತಿಪಾದಿಸಿದ್ದಾರೆ.