<p><strong>ನವದೆಹಲಿ</strong>: ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಉತ್ತರ ಪ್ರದೇಶ ಕಾಂಗ್ರೆಸ್ ನಾಯಕರ ಜೊತೆ ಸೋಮವಾರ ಚುನಾವಣಾ ತಂತ್ರಗಾರಿಕೆಯ ಸಭೆ ನಡೆಸಿದರು.</p>.<p>ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಪ್ರಿಯಾಂಕಾ ಅವರು, ‘ಬಿಜೆಪಿ ಸರ್ಕಾರದ ದುರಾಡಳಿತ, ಬೆಲೆ ಏರಿಕೆ, ಕಾನೂನು ಸುವ್ಯವಸ್ಥೆ ಕುಸಿತ, ಕೊರೊನಾ ನಿರ್ವಹಣೆಯಲ್ಲಿ ಸರ್ಕಾರದ ವಿಫಲತೆಯ ಬಗ್ಗೆ ಬೀದಿ ಬೀದಿಗಳಲ್ಲಿ ಜನಾಂದೋಲನ ರೂಪಿಸಬೇಕು’ ಎಂದು ಕಾಂಗ್ರೆಸ್ ಮುಖಂಡರಿಗೆ ಕರೆ ನೀಡಿದ್ದಾರೆ.</p>.<p>‘ಅಲ್ಲದೇ ಉತ್ತರ ಪ್ರದೇಶದಲ್ಲಿ ರೈತರ ಆದಾಯ ಕುಸಿತಗೊಂಡಿದ್ದು, ಖರ್ಚು ಹೆಚ್ಚಾಗಿದೆ. ಇದರ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು’ ಎಂಬುದಾಗಿ ಪ್ರಿಯಾಂಕಾ ಅವರು ಚರ್ಚಿಸಿದರು ಎನ್ನಲಾಗಿದೆ.</p>.<p>ಉತ್ತರ ಪ್ರದೇಶ ಕಾಂಗ್ರೆಸ್ ನಾಯಕರಾದ ಅಜಯ್ ಕುಮಾರ್ ಲಲ್ಲು, ಸಲ್ಮಾನ್ ಖುರ್ಷಿದ್, ರಾಜೀವ್ ಶುಕ್ಲಾ, ಪ್ರಮೋದ್ ತಿವಾರಿ, ರಷಿದ್ ಅಲ್ವಿ ಅವರು ಸಭೆಯಲ್ಲಿ ಭಾಗವಹಿಸಿದ್ದರು.</p>.<p>ಬರಲಿರುವ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಲ್ಲದೇ ಅಧಿಕಾರ ಹಿಡಿಯುವ ವಿಶ್ವಾಸವನ್ನು ಆ ರಾಜ್ಯದ ಕಾಂಗ್ರೆಸ್ ಮುಖಂಡರು ವ್ಯಕ್ತಪಡಿಸಿದ್ದಾರೆ.</p>.<p><strong>ಇದನ್ನೂ ಓದಿ:<a href="https://www.prajavani.net/india-news/rajinikanth-disbands-mandram-designed-for-political-entry-says-not-game-for-politics-847379.html" target="_blank"></a></strong><a href="https://www.prajavani.net/india-news/rajinikanth-disbands-mandram-designed-for-political-entry-says-not-game-for-politics-847379.html" target="_blank">‘ರಜನಿ ಮಕ್ಕಳ್ ಮಂದಿರಂ‘ ವಿಸರ್ಜನೆ: ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಇತಿಶ್ರೀ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಉತ್ತರ ಪ್ರದೇಶ ಕಾಂಗ್ರೆಸ್ ನಾಯಕರ ಜೊತೆ ಸೋಮವಾರ ಚುನಾವಣಾ ತಂತ್ರಗಾರಿಕೆಯ ಸಭೆ ನಡೆಸಿದರು.</p>.<p>ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಪ್ರಿಯಾಂಕಾ ಅವರು, ‘ಬಿಜೆಪಿ ಸರ್ಕಾರದ ದುರಾಡಳಿತ, ಬೆಲೆ ಏರಿಕೆ, ಕಾನೂನು ಸುವ್ಯವಸ್ಥೆ ಕುಸಿತ, ಕೊರೊನಾ ನಿರ್ವಹಣೆಯಲ್ಲಿ ಸರ್ಕಾರದ ವಿಫಲತೆಯ ಬಗ್ಗೆ ಬೀದಿ ಬೀದಿಗಳಲ್ಲಿ ಜನಾಂದೋಲನ ರೂಪಿಸಬೇಕು’ ಎಂದು ಕಾಂಗ್ರೆಸ್ ಮುಖಂಡರಿಗೆ ಕರೆ ನೀಡಿದ್ದಾರೆ.</p>.<p>‘ಅಲ್ಲದೇ ಉತ್ತರ ಪ್ರದೇಶದಲ್ಲಿ ರೈತರ ಆದಾಯ ಕುಸಿತಗೊಂಡಿದ್ದು, ಖರ್ಚು ಹೆಚ್ಚಾಗಿದೆ. ಇದರ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು’ ಎಂಬುದಾಗಿ ಪ್ರಿಯಾಂಕಾ ಅವರು ಚರ್ಚಿಸಿದರು ಎನ್ನಲಾಗಿದೆ.</p>.<p>ಉತ್ತರ ಪ್ರದೇಶ ಕಾಂಗ್ರೆಸ್ ನಾಯಕರಾದ ಅಜಯ್ ಕುಮಾರ್ ಲಲ್ಲು, ಸಲ್ಮಾನ್ ಖುರ್ಷಿದ್, ರಾಜೀವ್ ಶುಕ್ಲಾ, ಪ್ರಮೋದ್ ತಿವಾರಿ, ರಷಿದ್ ಅಲ್ವಿ ಅವರು ಸಭೆಯಲ್ಲಿ ಭಾಗವಹಿಸಿದ್ದರು.</p>.<p>ಬರಲಿರುವ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಲ್ಲದೇ ಅಧಿಕಾರ ಹಿಡಿಯುವ ವಿಶ್ವಾಸವನ್ನು ಆ ರಾಜ್ಯದ ಕಾಂಗ್ರೆಸ್ ಮುಖಂಡರು ವ್ಯಕ್ತಪಡಿಸಿದ್ದಾರೆ.</p>.<p><strong>ಇದನ್ನೂ ಓದಿ:<a href="https://www.prajavani.net/india-news/rajinikanth-disbands-mandram-designed-for-political-entry-says-not-game-for-politics-847379.html" target="_blank"></a></strong><a href="https://www.prajavani.net/india-news/rajinikanth-disbands-mandram-designed-for-political-entry-says-not-game-for-politics-847379.html" target="_blank">‘ರಜನಿ ಮಕ್ಕಳ್ ಮಂದಿರಂ‘ ವಿಸರ್ಜನೆ: ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಇತಿಶ್ರೀ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>