ಯಾತ್ರೆಯನ್ನು ರದ್ದುಗೊಳಿಸಿದ ನಂತರ ಅನಂತನಾಗ್ ಜಿಲ್ಲೆಯ ಖಾನಾಬಾಲ್ನಲ್ಲಿ ದಿಢೀರ್ ಪತ್ರಿಕಾಗೋಷ್ಠಿ ನಡೆಸಿದ್ದ ರಾಹುಲ್, ‘ಬನಿಹಾಲ್ನಿಂದ ಕಾಜಿಗುಂಡಕ್ಕೆ ತೆರಳುವಾಗ, ಯಾತ್ರೆಯು ಜವಾಹರ್ ಸುರಂಗ ದಾಟುತ್ತಿದ್ದಂತೆಯೇ ನನ್ನ ಸ್ವಾಗತಕ್ಕಾಗಿ ಜನರು ದೊಡ್ಡ ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದರು. ಆದರೆ, ಈ ಜನರನ್ನು ನಿಯಂತ್ರಿಸಲು ಒಬ್ಬ ಪೊಲೀಸ್ ಸಿಬ್ಬಂದಿಯೂ ಇರಲಿಲ್ಲ’ ಎಂದು ಆರೋಪಿಸಿದ್ದರು.